ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ.

ಇದರಿಂದ ಕುಪಿತಗೊಂಡ ದಲಿತ ಸಂಘಟನೆಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಶ್ವನಾಥಪುರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಮಂಜುನಾಥ್. ವಿಚಾರಣೆ ಬಳಿಕ ತಾನು ಮಾಡಿದ ತಪ್ಪನ್ನು ಒಪ್ಪಿಕೊಂಡು ಕ್ಷಮೆ‌ಯಾಚಿಸಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕವನ್ನು ಯತಾಸ್ಥಿತಿಗೆ ತರಲಾಗುವುದು ಎಂದು ಭರವಸೆ ನೀಡಿದ ಕೃತ್ಯ ಎಸಗಿದ್ದ ವೆಂಕಟೇಗೌಡ.

ಸೆಪ್ಟೆಂಬರ್ 14ರಂದು ರಾಮನಾಥಪುರ ಕಾಲೋನಿಯ ದಲಿತ ಸಂಘಟನೆಯ ನಾಮಫಲದಲ್ಲಿದ್ದ ಅಂಬೇಡ್ಕರ್ ಸ್ಟಿಕ್ಕರ್ ಹರಿದು ಸಗಣಿ ಎರಚಿದ್ದ. ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮಕ್ಕೆ ಬೇಕಂತಲೇ ಅಡ್ಡಿಪಡಿಸಲು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಹರಿಯಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದರು.

ಸಗಣಿ ಸುರಿದ ಘಟನೆಯನ್ನು ಕಾಲೋನಿಯ ಕೆಲವು ಗ್ರಾಮಸ್ಥರು ನೋಡಿ ಪ್ರಶ್ನೆ ಮಾಡಿ ಕೂಗಿಕೊಂಡಿದ್ದಾರೆ ಕಾಲೋನಿಯ ಜನರು ಇತರೆ ಯುವಕರು ಎಲ್ಲರೂ ಅಲ್ಲಿಗೆ ಬರುವಷ್ಟರಲ್ಲಿ ಓಡಿ ಹೋಗಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕಾಲೋನಿಯ ಗ್ರಾಮಸ್ಥರೊಂದಿಗೆ ವಿಚಾರಿಸಿ ಫೋಟೋ ಮತ್ತು ಮಾಹಿತಿ ಪಡೆದು ಹತ್ತಿರದಲ್ಲಿರುವ ಸಿಸಿಟಿವಿಗಳ ಕ್ಯಾಮೆರಾವನ್ನು ಪರಿಶೀಲಿಸಿದ್ದಾರೆ.

ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಅಂಬೇಡ್ಕರ್ ಫಲಕಕ್ಕೆ ರಕ್ಷಣೆ ಮತ್ತು ಭದ್ರತೆಯೊಂದಿಗೆ ಮರುಸ್ಥಾಪನೆ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಪ್ರಜಾ ವಿಮೋಚನಾ ಚಳವಳಿ ಮುಖಂಎರು ಒತ್ತಾಯಿಸಿದ್ದರು.

ಈ ಹಿನ್ನೆಲೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ, ಕೃತ್ಯ ಎಸಗಿದವನಿಗೆ ಕಾನೂನು ಪಾಠ ಕಲಿಸಿ ಇನ್ನು ಮುಂದೆ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

29 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago