Categories: ಕೋಲಾರ

ಡಾ.ಮನಮೋಹನ್ ಸಿಂಗ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ

ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.

ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು

ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

8 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

20 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

20 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

21 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

22 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

1 day ago