Categories: ಕೋಲಾರ

ಡಾ.ಮನಮೋಹನ್ ಸಿಂಗ್ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ

ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್‌ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.

ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು

ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.

Ramesh Babu

Journalist

Recent Posts

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

5 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

17 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

18 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

1 day ago