ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.
ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು
ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…