ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.
ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು
ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…