ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.
ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು
ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…