ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.
ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು
ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…