ಕೋಲಾರ: ಖ್ಯಾತ ಆರ್ಥಿಕ ತಜ್ಣ, ಭಾರತದ ಸರ್ವಶ್ರೇಷ್ಠ ಮಾಜಿ ಪ್ರಧಾನ ಮಂತ್ರಿ ಮನಮೋಹನ್ಸಿಂಗ್ ರವರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ರಾಜ್ಯ ರೈತ ಸಂಘದ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.
ಬಂಗಾರಪೇಟೆ ನಗರದ ಅಂಬೇಡ್ಕರ್ ಪುತ್ಥಳಿ ಬಳಿ ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ದೇಶದಲ್ಲಿ ಉದ್ಯೋಗ, ಆಹಾರ ಭದ್ರತೆ, ಶಿಕ್ಷಣ ಹಕ್ಕು ನಗರಾಭಿವೃದ್ಧಿ, ಸರ್ವ ಶಿಕ್ಷಣ ಮತ್ತಿತರ ಆರ್ಥಿಕವಾಗಿ ಜನಪರವಾಗಿ ಬಡವರ, ಕೂಲಿಕಾರ್ಮಿಕರ ಯೋಜನೆಗಳನ್ನು ಜಾರಿಗೊಳಿಸಿದ ಮಹಾನ್ ನಾಯಕ ಮನಮೋಹನ್ ಸಿಂಗ್ ರವರ ಅಸ್ತಂಗತ ದೇಶಕ್ಕೆ ತುಂಬಲಾರದ ನಷ್ಟ ಹಾಗೂ ನೋವಾಗಿದೆ ಅವರ ಜನಪರ ಆದರ್ಶಗಳನ್ನು ಇಂದಿನ ಸರ್ಕಾರಗಳು ಅಳವಡಿಸಿಕೊಳ್ಳ ಬೇಕು ಎಂದು ತಿಳಿಸಿದರು.
ದೇಶದಲ್ಲಿ ಮನಮೋಹನ್ ಸಿಂಗ್ ರವರನ್ನು ಪರಿಸ್ಥಿತಿಯ ಕೈಗೊಂಬೆ ಅಪಘಾತದ ಪ್ರಧಾನಿ ಅಥವಾ ಸೈಲೆಂಟ್ ಪ್ರಧಾನಿ ಎಂಬ ಟೀಕೆಗಳಿವೆ ಇದರೆಲ್ಲದರ ನಡುವೆಯೂ ರವರನ್ನು ದೇಶದ ಅಭಿವೃದ್ಧಿ ಹೊಂದುವಂತೆ ಮಾಡಿದ ಪ್ರಧಾನಿಯಲ್ಲೊಬ್ಬರು ಎಂದು ಹಲವಾರು ತಜ್ಞರು ಪರಿಗಣಿಸುತ್ತಿದ್ದಾರೆ. ಇವರ ಅವಧಯಲ್ಲಿ ಭಾರತ ಇಡೀ ವಿಶ್ವದಲ್ಲೇ ಚೀನಾ ನಂತರ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಹೆಗ್ಗಳಿಕೆ ಪಾತ್ರವಾಗಿತ್ತು ನರೇಗಾ, ಮೊಬೈಲ್ ಪೊಟೋಬಲಿಟಿ ಸೌಲಭ್ಯ ಇತ್ಯಾದಿ ಯೋಜನೆಗಳನ್ನು ಜಾರಿ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದರು
ಭಾರತ ಆಮೇರಿಕಾ ನಡುವಿನ ಅಣ್ವಸ್ತ್ರ ಒಪ್ಪಂದ ಹಲವಾರು ದೃಷ್ಠಿಯಿಂದ ಅದು ಐತಿಹಾಸಿಕ ಒಪ್ಪಂದವಾಗಿತ್ತು, ಅವರ ಆಡಳಿತ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಶಾಶ್ವತವಾಗಿ ಉಳಿಯಲು ಕಾರ್ಯಕ್ರಮದಲ್ಲಿ ನೀಡಿದ್ದಾರೆ ಇಂತಹ ದೇಶ ಕಂಡ ಅಪ್ರತಿಮ ಪ್ರಧಾನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದರು ಈ ಸಂದರ್ಭದಲ್ಲಿ ರೈತ ಮುಖಂಡರಾದ ಮರಗಲ್ ಶ್ರೀನಿವಾಸ. ಪುತ್ತೆರಿ ರಾಜು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…