ಡಾ.ರಾಜ್ ಕುಮಾರ್ ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ-ಕೆ.ಪಿ.ಲಕ್ಷ್ಮೀನಾರಾಯಣ್

ಡಾ.ರಾಜ್ ಕುಮಾರ್ ಅವರು ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ ಆಗಿದ್ದಾರೆ. ಅವರು ಕನ್ನಡ ಚಲನಚಿತ್ರ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಲೆಕ್ಕಪರಿಶೋಧಕ ಲಯನ್ ಕೆ.ಪಿ.ಲಕ್ಷ್ಮೀನಾರಾಯಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಮತ್ತು ಕನ್ನಡ ಎಂಬ ವಿಷಯ ಕುರಿತು ಮಾತನಾಡಿದರು.

ಡಾ.ರಾಜ್ ಕುಮಾರ್ ಅವರ ಕನ್ನಡ ಭಾಷೆಯ ಉಚ್ಚಾರಣೆ  ಮಧುರ‌ ಮತ್ತು ಸ್ಪಷ್ಟತೆಯಿಂದ ಕೂಡಿತ್ತು. ಉತ್ತಮ ಕನ್ನಡ ಹೇಗಿರಬೇಕೆಂದರೆ‌ ಡಾ.ರಾಜ್ ಕುಮಾರ್ ಅಂತೆ ಇರಬೇಕೆಂದು ಕನ್ನಡಿಗರು ಅಭಿಮಾನದಿಂದ ಹೇಳುತ್ತಿದ್ದರು. ಅವರು ತಮ್ಮ ಯಶಸ್ಸಿನ ಉತ್ತುಂಗದಲ್ಲೂ ತಮ್ಮ ಸರಳತೆಯನ್ನು ಕಾಯ್ದುಕೊಂಡು, ಅಭಿಮಾನಿಗಳಿಗೆ ಆದರ್ಶಪ್ರಾಯರಾದರು. ಡಾ.ರಾಜ್ ಕುಮಾರ್ ಅವರ ಸಿನಿಮಾ ಪಾತ್ರಗಳು ಮತ್ತು ಜೀವನಶೈಲಿ ಕನ್ನಡಿಗರ ಸಂಸ್ಕೃತಿ ಪ್ರತಿನಿಧಿಸುತ್ತದೆ ಎಂದರು.

ಡಾ.ರಾಜ್ ಕುಮಾರ್ ಅವರು ಕನ್ನಡಿಗರಲ್ಲಿ ‌ಕನ್ನಡ ನಾಡು-ನುಡಿಯ ಪ್ರಜ್ಞೆಯನ್ನು ಜಾಗೃತಗೊಳಿಸಿದರು. ಗೋಕಾಕ್ ಚಳವಳಿಯಂತಹ ಕನ್ನಡ ಭಾಷಾ ಚಳುವಳಿಗಳಿಗೆ ಬೆಂಬಲ ನೀಡಿದರು. ‌ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಡಾ.ರಾಜ್ ಕುಮಾರ್ ಅವರಿಗಿದ್ದ ಬದ್ಧತೆ ಅವರನ್ನು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನ ಪಡೆಯುಂತೆ ಮಾಡಿತು. ಜನಸಾಮಾನ್ಯರ ಆಶೋತ್ತರಗಳು ಮತ್ತು ಸಾಮಾಜಿಕ ಕಳಕಳಿ‌ ರಾಜ್‌ಕುಮಾರ್ ಚಲನಚಿತ್ರಗಳ ಪ್ರಮುಖ ಕಥಾ ವಸ್ತುಗಳು ಆಗಿರುವ ಕಾರಣದಿಂದ ಅವರು ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ ಆಗಿದ್ದಾರೆ ಎಂದರು.

ಸಾವಯವ ಕೃಷಿ ಮತ್ತು ಸಮಗ್ರ ಕೃಷಿ ಎಂಬ ವಿಷಯ ಕುರಿತು ಮಾತನಾಡಿದ ಕೃಷಿ ತಜ್ಞರಾದ ಲಯನ್ ಕೆ.ವಿ.ಪ್ರಭುಸ್ವಾಮಿ, ನಾಗರಿಕತೆಯೊಂದಿಗೆ ಕೃಷಿಯು ಬೆಳೆದು ಬಂದಿದೆ. ಒಂದು ದೇಶ ಕೃಷಿಯಿಂದ ಶ್ರೀಮಂತವಾಗಿದ್ದರೆ ಮಾತ್ರ ಅಂತಹ ದೇಶಕ್ಕೆ ಉಜ್ವಲ ಭವಿಷ್ಯ ಇರುತ್ತದೆ. ಪ್ರಾರಂಭದಲ್ಲಿ ಸಾವಯವ ಕೃಷಿಯಿತ್ತು. ಎರಡನೆಯ ಮಹಾಯುದ್ಧದ ನಂತರ ಕೃಷಿಯಲ್ಲಿ ರಾಸಾಯನಿಕ ಬಳಕೆ ಪ್ರಾರಂಭವಾಯಿತು. ಕೃಷಿಕರು ಎಲ್ಲಾ ಬೆಳೆಗಳನ್ನು ಬೆಳೆದು ಗುಣಮಟ್ಟ ಮತ್ತು ಉತ್ಪಾದನೆಯನ್ನು ಹೆಚ್ಚಿಸುವುದು ಸಮಗ್ರ ಕೃಷಿಯಾಗಿದೆ. ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವುದರ ಕಡೆಗೆ ನಾವಿಂದು ಗಮನ ನೀಡಬೇಕಾಗಿದೆ.‌ ಕೃಷಿಯ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಾಗಿದೆ. ಕೃಷಿಯಲ್ಲಿ ಮೊದಲಿನಿಂದಲೂ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎನ್.ಯೋಗನರಸಿಂಹಮೂರ್ತಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಅರುಣ್ ಕುಮಾರ್, ಮುಖ್ಯಶಿಕ್ಷಕ ವಿರೂಪಾಕ್ಷ, ಶಿಕ್ಷಕ ಚಂದ್ರಶೇಖರ್, ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವಂ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

49 minutes ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

1 hour ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

9 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

22 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

24 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

1 day ago