ಡಾ.ರಾಜ್ ಕುಮಾರ್ ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ-ಕೆ.ಪಿ.ಲಕ್ಷ್ಮೀನಾರಾಯಣ್

ಡಾ.ರಾಜ್ ಕುಮಾರ್ ಅವರು ಕನ್ನಡ ಮತ್ತು ಕರ್ನಾಟಕದ ಅಸ್ಮಿತೆ ಆಗಿದ್ದಾರೆ. ಅವರು ಕನ್ನಡ ಚಲನಚಿತ್ರ ಮತ್ತು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ಲೆಕ್ಕಪರಿಶೋಧಕ ಲಯನ್ ಕೆ.ಪಿ.ಲಕ್ಷ್ಮೀನಾರಾಯಣ್ ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಡಾ.ರಾಜ್ ಕುಮಾರ್ ಮತ್ತು ಕನ್ನಡ ಎಂಬ ವಿಷಯ ಕುರಿತು ಮಾತನಾಡಿದರು.

ಡಾ.ರಾಜ್ ಕುಮಾರ್ ಅವರ ಕನ್ನಡ ಭಾಷೆಯ ಉಚ್ಚಾರಣೆ  ಮಧುರ‌ ಮತ್ತು ಸ್ಪಷ್ಟತೆಯಿಂದ ಕೂಡಿತ್ತು. ಉತ್ತಮ ಕನ್ನಡ ಹೇಗಿರಬೇಕೆಂದರೆ‌ ಡಾ.ರಾಜ್ ಕುಮಾರ್ ಅಂತೆ ಇರಬೇಕೆಂದು ಕನ್ನಡಿಗರು ಅಭಿಮಾನದಿಂದ ಹೇಳುತ್ತಿದ್ದರು. ಅವರು ತಮ್ಮ ಯಶಸ್ಸಿನ ಉತ್ತುಂಗದಲ್ಲೂ ತಮ್ಮ ಸರಳತೆಯನ್ನು ಕಾಯ್ದುಕೊಂಡು, ಅಭಿಮಾನಿಗಳಿಗೆ ಆದರ್ಶಪ್ರಾಯರಾದರು. ಡಾ.ರಾಜ್ ಕುಮಾರ್ ಅವರ ಸಿನಿಮಾ ಪಾತ್ರಗಳು ಮತ್ತು ಜೀವನಶೈಲಿ ಕನ್ನಡಿಗರ ಸಂಸ್ಕೃತಿ ಪ್ರತಿನಿಧಿಸುತ್ತದೆ ಎಂದರು.

ಡಾ.ರಾಜ್ ಕುಮಾರ್ ಅವರು ಕನ್ನಡಿಗರಲ್ಲಿ ‌ಕನ್ನಡ ನಾಡು-ನುಡಿಯ ಪ್ರಜ್ಞೆಯನ್ನು ಜಾಗೃತಗೊಳಿಸಿದರು. ಗೋಕಾಕ್ ಚಳವಳಿಯಂತಹ ಕನ್ನಡ ಭಾಷಾ ಚಳುವಳಿಗಳಿಗೆ ಬೆಂಬಲ ನೀಡಿದರು. ‌ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಡಾ.ರಾಜ್ ಕುಮಾರ್ ಅವರಿಗಿದ್ದ ಬದ್ಧತೆ ಅವರನ್ನು ಕನ್ನಡಿಗರ ಹೃದಯದಲ್ಲಿ ವಿಶೇಷ ಸ್ಥಾನ ಪಡೆಯುಂತೆ ಮಾಡಿತು. ಜನಸಾಮಾನ್ಯರ ಆಶೋತ್ತರಗಳು ಮತ್ತು ಸಾಮಾಜಿಕ ಕಳಕಳಿ‌ ರಾಜ್‌ಕುಮಾರ್ ಚಲನಚಿತ್ರಗಳ ಪ್ರಮುಖ ಕಥಾ ವಸ್ತುಗಳು ಆಗಿರುವ ಕಾರಣದಿಂದ ಅವರು ಎಲ್ಲರ ಮನಸ್ಸನ್ನು ಗೆದ್ದಿದ್ದಾರೆ. ಕರ್ನಾಟಕದ ಜನರಿಗೆ ಮಾದರಿ ಮತ್ತು ಆದರ್ಶ ವ್ಯಕ್ತಿ ಡಾ.ರಾಜ್ ಕುಮಾರ್ ಆಗಿದ್ದಾರೆ ಎಂದರು.

ಸಾವಯವ ಕೃಷಿ ಮತ್ತು ಸಮಗ್ರ ಕೃಷಿ ಎಂಬ ವಿಷಯ ಕುರಿತು ಮಾತನಾಡಿದ ಕೃಷಿ ತಜ್ಞರಾದ ಲಯನ್ ಕೆ.ವಿ.ಪ್ರಭುಸ್ವಾಮಿ, ನಾಗರಿಕತೆಯೊಂದಿಗೆ ಕೃಷಿಯು ಬೆಳೆದು ಬಂದಿದೆ. ಒಂದು ದೇಶ ಕೃಷಿಯಿಂದ ಶ್ರೀಮಂತವಾಗಿದ್ದರೆ ಮಾತ್ರ ಅಂತಹ ದೇಶಕ್ಕೆ ಉಜ್ವಲ ಭವಿಷ್ಯ ಇರುತ್ತದೆ. ಪ್ರಾರಂಭದಲ್ಲಿ ಸಾವಯವ ಕೃಷಿಯಿತ್ತು. ಎರಡನೆಯ ಮಹಾಯುದ್ಧದ ನಂತರ ಕೃಷಿಯಲ್ಲಿ ರಾಸಾಯನಿಕ ಬಳಕೆ ಪ್ರಾರಂಭವಾಯಿತು. ಕೃಷಿಕರು ಎಲ್ಲಾ ಬೆಳೆಗಳನ್ನು ಬೆಳೆದು ಗುಣಮಟ್ಟ ಮತ್ತು ಉತ್ಪಾದನೆಯನ್ನು ಹೆಚ್ಚಿಸುವುದು ಸಮಗ್ರ ಕೃಷಿಯಾಗಿದೆ. ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವುದರ ಕಡೆಗೆ ನಾವಿಂದು ಗಮನ ನೀಡಬೇಕಾಗಿದೆ.‌ ಕೃಷಿಯ ಬಗ್ಗೆ ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕಾಗಿದೆ. ಕೃಷಿಯಲ್ಲಿ ಮೊದಲಿನಿಂದಲೂ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚನ್ನವೀರನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎನ್.ಯೋಗನರಸಿಂಹಮೂರ್ತಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಟಿ.ಅರುಣ್ ಕುಮಾರ್, ಮುಖ್ಯಶಿಕ್ಷಕ ವಿರೂಪಾಕ್ಷ, ಶಿಕ್ಷಕ ಚಂದ್ರಶೇಖರ್, ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ, ಕಲಾವಿದರುಗಳಾದ ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವಂ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago