ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ- ಇಂಧನ ಸಚಿವ ಕೆ.ಜೆ ಜಾರ್ಜ್

‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಮಾರುತಿ ಸೇವಾ ನಗರದ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಶುಕ್ರವಾರ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಹಾಗೂ ಕೆ.ಜೆ.ಜಾರ್ಜ್‌ ಮಾತನಾಡಿದರು.

“ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣವಾಗಿದೆ. ನಾನು ಡಾ.ರಾಜ್‌ಕುಮಾರ್‌ ಅಭಿಮಾನಿ, ಅವರ ಹೆಸರಿನ ಬಸ್‌ನಿಲ್ದಾಣವನ್ನು ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ. ನಮ್ಮ ಕನ್ನಡದ ಧ್ವಜ ಜಾಗತಿಕ ಮಟ್ಟದಲ್ಲಿ ಹಾರಾತ್ತಿದೆ. ಕನ್ನಡವೇ ನನ್ನ ಉಸಿರು, ರಾಜ್ಯದ ಜನರ ಅಭಿವೃದ್ದಿಯೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಮುಖ್ಯ ಗುರಿ” ಎಂದರು.

“ಸಂಘದವರು ಪ್ರಯಾಣಿಕರಿಗೆ ನೆರಳು, ಮಳೆಯಿಂದ ರಕ್ಷಣೆ ಮತ್ತು ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಟ್ಟಿದ್ದಾರೆ. ಇದು ಎಲ್ಲರೂ ಹೆಮ್ಮೆ ಪಡುವ ಕಾರ್ಯಕ್ರಮವಾಗಿದೆ. ಜನ ನೆನಯುವುದು ಒಳ್ಳೆಯ ಕೆಲಸಗಳಿಂದ ಮಾತ್ರ. ಸರ್ವಜ್ಞ ನಗರದ ಪ್ರತಿನಿಧಿಯಾಗಿರುವುದು ನನ್ನ ಭಾಗ್ಯ. ನಮ್ಮ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ,” ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

“ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಗರಿಕರಿಗೆ ಸೌಕರ್ಯ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೊಂದು ವರ್ಷದಲ್ಲಿ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ನೆನಪಿಟ್ಟುಕೊಳ್ಳುವಂಥ ಯೋಜನೆಗಳು ಅನುಷ್ಠಾನಗೊಳ್ಳಲಿದೆ. ಕಾಚರಕನಹಳ್ಳಿಯಲ್ಲಿ ಕೆರೆಯನ್ನು ಅಭಿವೃದ್ದಿಪಡಿಸುತ್ತಿದ್ದೇವೆ. ಕ್ರೀಡಾಂಗಣ, ಆಸ್ಪತ್ರೆ ಮಾಡುತ್ತಿದ್ದೇವೆ. ಜತೆಗೆ ಬೃಹತ್ ಸರ್ವಜ್ಞ ಪ್ರತಿಮೆಯನ್ನು ನಿರ್ಮಿಸಲಿದ್ದೇವೆ. ಅಭಿವೃದ್ದಿ ವಿಚಾರದಲ್ಲಿ ನಾವು ಎಂದಿಗೂ ರಾಜಕೀಯ ಮಾಡಿಲ್ಲ, ಅದು ಚುನಾವಣೆಗಷ್ಟೇ ಸೀಮಿತ,” ಎಂದರು.

*ಸಾರಾ ಗೋವಿಂದ್ ನನ್ನ ಆತ್ಮೀಯರು*
ನಾನು ಕೊಡಗಿನಲ್ಲಿ ಇದ್ದ ಸಮಯದಿಂದಲೂ ಸಾರಾ ಗೋವಿಂದು ಅವರ ಪರಿಚಯವಿದೆ. ನಟ ಅಂಬರೀಶ್ ಅವರನ್ನು ನನಗೆ ಪರಿಚಯಿಸಿಕೊಟ್ಟಿದ್ದರು. ನಾನು ರಾಜಕಾರಣಕ್ಕೆ ಬಂದ ಮೇಲೂ ಬಹಳ ಆತ್ಮೀಯವಾಗಿಯೇ ಇದ್ದಾರೆ. ಡಾ.ರಾಜ್ ಹಾಗೂ ಪುನೀತ್ ಅವರ ಅಭಿಮಾನಿಗಳ ಸಂಘವನ್ನು ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಜಾರ್ಜ್‌ .ಮೆಚ್ಚಿಗೆ ವ್ಯಕ್ತಪಡಿಸಿದರು.

ಡಾ.ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ಸಾರಾ ಗೋವಿಂದು ಮಾತನಾಡಿ, “ಸರ್ವಜ್ಞ ನಗರ ಕ್ಷೇತ್ರದಲ್ಲಿ ಕೆ.ಜೆ.ಜಾರ್ಜ್ ಅವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮಹನೀಯರ ನೆನಪನ್ನು ಶಾಶ್ವತಗೊಳಿಸುವ ಕೆಲಸವೂ ಅವರಿಂದ ನಡೆದಿದೆ,” ಎಂದು ಶ್ಲಾಘಿಸಿದರು.

ಅಭಿಮಾನಿ ಸಂಘದ ಡಿ.ಕೆ.ರಾಜು, ವೆಂಕಟೇಶ್, ಅಮರ್, ಮುರಳಿ ಹಾಗೂ ಕಾಂಗ್ರೆಸ್ ಮುಖಂಡರಾದ ರಘುದೇವರಾಜ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

14 hours ago