ಡಾ.ರಾಜ್‌ ಸ್ಪೂರ್ತಿಯಿಂದ ಬಸ್ ತಂಗುದಾಣ ನಿರ್ಮಾಣ- ಇಂಧನ ಸಚಿವ ಕೆ.ಜೆ ಜಾರ್ಜ್

‘ಕನ್ನಡ ನಮ್ಮ ಉಸಿರು, ನಮ್ಮ ಜೀವ’ ಕರ್ನಾಟಕದ ಜನತೆಯ ಅಭಿವೃದ್ದಿಯೇ ನಮ್ಮ ಮುಖ್ಯ ಗುರಿ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಮಾರುತಿ ಸೇವಾ ನಗರದ ಬಾಣಸವಾಡಿ ಮುಖ್ಯರಸ್ತೆಯಲ್ಲಿ ಶುಕ್ರವಾರ ನೂತನ ಬಸ್ ತಂಗುದಾಣವನ್ನು ಉದ್ಘಾಟಿಸಿ ಸರ್ವಜ್ಞನಗರ ವಿಧಾನ ಸಭಾ ಕ್ಷೇತ್ರದ ಶಾಸಕರೂ ಆಗಿರುವ ಇಂಧನ ಸಚಿವ ಹಾಗೂ ಕೆ.ಜೆ.ಜಾರ್ಜ್‌ ಮಾತನಾಡಿದರು.

“ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಬಸ್ ತಂಗುದಾಣ ನಿರ್ಮಾಣವಾಗಿದೆ. ನಾನು ಡಾ.ರಾಜ್‌ಕುಮಾರ್‌ ಅಭಿಮಾನಿ, ಅವರ ಹೆಸರಿನ ಬಸ್‌ನಿಲ್ದಾಣವನ್ನು ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ. ನಮ್ಮ ಕನ್ನಡದ ಧ್ವಜ ಜಾಗತಿಕ ಮಟ್ಟದಲ್ಲಿ ಹಾರಾತ್ತಿದೆ. ಕನ್ನಡವೇ ನನ್ನ ಉಸಿರು, ರಾಜ್ಯದ ಜನರ ಅಭಿವೃದ್ದಿಯೇ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಮುಖ್ಯ ಗುರಿ” ಎಂದರು.

“ಸಂಘದವರು ಪ್ರಯಾಣಿಕರಿಗೆ ನೆರಳು, ಮಳೆಯಿಂದ ರಕ್ಷಣೆ ಮತ್ತು ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಟ್ಟಿದ್ದಾರೆ. ಇದು ಎಲ್ಲರೂ ಹೆಮ್ಮೆ ಪಡುವ ಕಾರ್ಯಕ್ರಮವಾಗಿದೆ. ಜನ ನೆನಯುವುದು ಒಳ್ಳೆಯ ಕೆಲಸಗಳಿಂದ ಮಾತ್ರ. ಸರ್ವಜ್ಞ ನಗರದ ಪ್ರತಿನಿಧಿಯಾಗಿರುವುದು ನನ್ನ ಭಾಗ್ಯ. ನಮ್ಮ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ,” ಎಂದು ಕೆ.ಜೆ.ಜಾರ್ಜ್ ತಿಳಿಸಿದರು.

“ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಾಗರಿಕರಿಗೆ ಸೌಕರ್ಯ ಒದಗಿಸಲು ಅನೇಕ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೊಂದು ವರ್ಷದಲ್ಲಿ ನಮ್ಮ ಕ್ಷೇತ್ರದಲ್ಲಿ ಎಲ್ಲರೂ ನೆನಪಿಟ್ಟುಕೊಳ್ಳುವಂಥ ಯೋಜನೆಗಳು ಅನುಷ್ಠಾನಗೊಳ್ಳಲಿದೆ. ಕಾಚರಕನಹಳ್ಳಿಯಲ್ಲಿ ಕೆರೆಯನ್ನು ಅಭಿವೃದ್ದಿಪಡಿಸುತ್ತಿದ್ದೇವೆ. ಕ್ರೀಡಾಂಗಣ, ಆಸ್ಪತ್ರೆ ಮಾಡುತ್ತಿದ್ದೇವೆ. ಜತೆಗೆ ಬೃಹತ್ ಸರ್ವಜ್ಞ ಪ್ರತಿಮೆಯನ್ನು ನಿರ್ಮಿಸಲಿದ್ದೇವೆ. ಅಭಿವೃದ್ದಿ ವಿಚಾರದಲ್ಲಿ ನಾವು ಎಂದಿಗೂ ರಾಜಕೀಯ ಮಾಡಿಲ್ಲ, ಅದು ಚುನಾವಣೆಗಷ್ಟೇ ಸೀಮಿತ,” ಎಂದರು.

*ಸಾರಾ ಗೋವಿಂದ್ ನನ್ನ ಆತ್ಮೀಯರು*
ನಾನು ಕೊಡಗಿನಲ್ಲಿ ಇದ್ದ ಸಮಯದಿಂದಲೂ ಸಾರಾ ಗೋವಿಂದು ಅವರ ಪರಿಚಯವಿದೆ. ನಟ ಅಂಬರೀಶ್ ಅವರನ್ನು ನನಗೆ ಪರಿಚಯಿಸಿಕೊಟ್ಟಿದ್ದರು. ನಾನು ರಾಜಕಾರಣಕ್ಕೆ ಬಂದ ಮೇಲೂ ಬಹಳ ಆತ್ಮೀಯವಾಗಿಯೇ ಇದ್ದಾರೆ. ಡಾ.ರಾಜ್ ಹಾಗೂ ಪುನೀತ್ ಅವರ ಅಭಿಮಾನಿಗಳ ಸಂಘವನ್ನು ಅಚ್ಚುಕಟ್ಟಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದು ಜಾರ್ಜ್‌ .ಮೆಚ್ಚಿಗೆ ವ್ಯಕ್ತಪಡಿಸಿದರು.

ಡಾ.ರಾಜ್‌ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ಸಾರಾ ಗೋವಿಂದು ಮಾತನಾಡಿ, “ಸರ್ವಜ್ಞ ನಗರ ಕ್ಷೇತ್ರದಲ್ಲಿ ಕೆ.ಜೆ.ಜಾರ್ಜ್ ಅವರು ಸಾಕಷ್ಟು ಅಭಿವೃದ್ದಿ ಕೆಲಸ ಮಾಡುತ್ತಿದ್ದಾರೆ. ಕನ್ನಡದ ಮಹನೀಯರ ನೆನಪನ್ನು ಶಾಶ್ವತಗೊಳಿಸುವ ಕೆಲಸವೂ ಅವರಿಂದ ನಡೆದಿದೆ,” ಎಂದು ಶ್ಲಾಘಿಸಿದರು.

ಅಭಿಮಾನಿ ಸಂಘದ ಡಿ.ಕೆ.ರಾಜು, ವೆಂಕಟೇಶ್, ಅಮರ್, ಮುರಳಿ ಹಾಗೂ ಕಾಂಗ್ರೆಸ್ ಮುಖಂಡರಾದ ರಘುದೇವರಾಜ್ ಉಪಸ್ಥಿತರಿದ್ದರು.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

9 hours ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

12 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

1 day ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago