ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.

Ramesh Babu

Journalist

Recent Posts

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

1 hour ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

4 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

4 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

10 hours ago

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

22 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

22 hours ago