ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.

Ramesh Babu

Journalist

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

9 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

14 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

15 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

17 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

20 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago