ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.
ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.
ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.
ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.
ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಶ್ರಮಿಸಿದರು. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.
ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…