ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago