ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಶಿವಕುಮಾರ ಮಹಾಶಿವಯೋಗಿ ಶ್ರೀಗಳು ಬಸವಾದಿ ಶರಣರ ಆಶಯಗಳನ್ನು ಆಚರಿಸಲು ಬದುಕನ್ನು ಮುಡಿಪಾಗಿಟ್ಟು ನುಡಿದಂತೆ ನಡೆದ ಮಹಾಯೋಗಿಗಳು. ಶ್ರೀ ಶ್ರೀ ಶಿವಕುಮಾರ ಮಹಾಶಿವಯೋಗಿಗಳಿಗೆ ಭಾರತ ರತ್ನ ನೀಡಬೇಕು. ಇದಕ್ಕಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ “ಸ್ಮೃತಿ ವನ”ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

12ನೇ ಶತಮಾನದಲ್ಲೇ ಬಸವಾದಿ ಶರಣರು ಜಾತಿ ರಹಿತ, ವರ್ಗ ರಹಿತ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿಯನ್ನೇ ಮಾಡಿದ್ದರು. ಮನುಷ್ಯ ಕುಲ ಇರುವವರೆಗೂ ಶಾಶ್ವತ ಆಗಿ ಉಳಿಯುವ ಸಂದೇಶ ಮತ್ತು ಮೌಲ್ಯಗಳನ್ನು ಬಿಟ್ಟು ಹೋಗಿದ್ದಾರೆ. ಈ ಮೌಲ್ಯಗಳನ್ನು ಪಾಲಿಸುವುದೇ ಬಸವಾದಿ ಶರಣರಿಗೆ ಸಲ್ಲಿಸುವ ಗೌರವ ಎಂದರು.

ಭಾರತ ಸಂವಿಧಾನದ ಆಶಯ ಮತ್ತು ಬಸವಾದಿ ಶರಣರ ಹೋರಾಟದ ಆಶಯ ಒಂದೇ ಆಗಿದೆ. ನಮಗೆ ಸಂವಿಧಾನ ಧರ್ಮಗ್ರಂಥ ಇದ್ದ ಹಾಗೆ. ಜನರ ಬದುಕನ್ನು ಎತ್ತಿರುವುದೇ ಈ ಸಂವಿಧಾನ ಎಂಬ ಧರ್ಮಗ್ರಂಥದ ಆಶಯ ಎಂದು ಹೇಳಿದರು.

ಕಾಯಕ ಮತ್ತು ದಾಸೋಹ ಎರಡೂ ಜೀವನ ಮೌಲ್ಯಗಳು. ಈ ಮೌಲ್ಯಗಳನ್ನು ಪೂಜ್ಯರು ತಮ್ಮ ಬದುಕಿನುದ್ದಕ್ಕೂ ಆಚರಿಸಿದ್ದರು‌. ಇಂದು 10 ಸಾವಿರ ಮಕ್ಕಳು ಮಠದಲ್ಲಿ ವಿದ್ಯೆ, ವಸತಿ, ಅನ್ನ ಪಡೆಯುತ್ತಿದ್ದಾರೆ ಎಂದರೆ ಶಿವಕುಮಾರ ಮಹಾಯೋಗಿಗಳ ಬದುಕಿನ ಆಚರಣೆಯೇ ಕಾರಣ ಎಂದು ತಿಳಿಸಿದರು.

ನಂಜುಂಡಪ್ಪ ಅವರ ವರದಿಯಂತೆ ಸರ್ಕಾರ ಕೆಲಸ ಮಾಡುತ್ತಿದೆ. ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ದಕ್ಷಿಣ ಮತ್ತು ಉತ್ತರ ಕರ್ನಾಟಕ ನಡುವಿನ ಅಭಿವೃದ್ಧಿಯ ತಾರತಮ್ಯವನ್ನು ಹೋಗಲಾಡಿಸಲು ಸರ್ಕಾರ ಶ್ರಮಿಸುತ್ತಿದೆ. ಶಿಕ್ಷಣದ ಮೂಲಕ ತಾರತಮ್ಯ ಮತ್ತು ಅಸಮಾನ ಪ್ರಜ್ಞೆಯನ್ನು ಅಳಿಸಲು ಸಾಧ್ಯವಿದೆ. ಬಸವಾದಿ ಶರಣರ ತತ್ವಾದರ್ಶಗಳು ಸಮಾಜದಲ್ಲಿ ಜಾರಿ ಆದಾಗ ಮಾತ್ರ ಸಮಾನ ಅವಕಾಶಗಳು ಸೃಷ್ಟಿಯಾಗಲು ಸಾಧ್ಯ ಎಂದರು.

ಶಿವಕುಮಾರ ಸ್ವಾಮಿಗಳು ಬದುಕಿನುದ್ದಕ್ಕೂ ಅಕ್ಷರ ಸಂಸ್ಕೃತಿ ಮೂಲಕ ಸಮಾಜದಲ್ಲಿ ಕ್ರಾಂತಿಕಾರಕ‌ ಬದಲಾವಣೆ ತರಲು ಶ್ರಮಿಸಿದರು‌. ಹೀಗಾಗಿ ಶ್ರೀಗಳ ಕಾರ್ಯ, ಕಾಳಜಿ ಮತ್ತು ಅವರ ನಡೆ-ನುಡಿ ಈ ಮಣ್ಣಿನಲ್ಲಿ ಅಜರಾಮರ ಆಗಿ ಉಳಿಯಲಿದೆ ಎಂದು ಹೇಳಿದರು.

ಬಸವಾದಿ ಶರಣರ ಆಶಯದಂತೆ ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಇದಕ್ಕಾಗಿ ವಾರ್ಷಿಕ 58 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗುತ್ತಿದೆ. ಇವೆಲ್ಲವೂ ಸಮಸಮಾಜದ ಆಶಯಗಳನ್ನು ಈಡೇರಿಸುವ ದಿಕ್ಕಿನಲ್ಲಿ ನಮ್ಮ ಸರ್ಕಾರ ಇಟ್ಟ ದಿಟ್ಟ ಹೆಜ್ಜೆಗಳಾಗಿವೆ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

20 minutes ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

17 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

17 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

20 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago