Categories: IPL 2025

ಡಿಕಾಕ್ ಅರ್ಧಶತಕದ ಮಿಂಚು ರಾಜಸ್ಥಾನ ವಿರುದ್ಧ ಕೆಕೆಆರ್ ಗೆ ಸುಲಭ ಜಯ

ಅಸ್ಸಾಂನ ಗುವಾಹಟಿಯಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಕ್ವಿಂಟಾನ್ ಡಿಕಾಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಟಾಸ್ ಗೆದ್ದ ಕೊಲ್ಕತ್ತಾ ತಂಡದ ನಾಯಕ ಅಜಿಂಕ್ಯಾ ರಹಾನೆ ಬೌಲಿಂಗ್ ಆಯ್ದುಕೊಂಡರು, ರಾಜಸ್ಥಾನದ ಬ್ಯಾಟಿಂಗ್ ಗೆ ಇನ್ನಿಲ್ಲದಂತೆ ಕಾಡಿದ ಬೌಲರ್ ಗಳು ಕಡಿಮೆ ಮೊತ್ತಕ್ಕೆ (151) ಕಟ್ಟಿ ಹಾಕಿದರು.

ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (29) ಹಾಗೂ ಸಂಜು ಸ್ಯಾಮ್ಸನ್ (13) ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ನಾಯಕ ರಿಯಾನ್ ಪರಾಗ್ (25) ಹಾಗೂ ಧ್ರುವ ಜುರೇಲ್ (33) ರನ್ ಪೇರಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಮೊಯಿನ್ ಅಲಿ(5) ಬೇಗನೇ ವಿಕೆಟ್ ಒಪ್ಪಿಸಿದರು ಆದರೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿಕಾಕ್ 8 ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ ಅಜೇಯ 97ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದುರು.

ನಾಯಕ ಅಜಿಂಕ್ಯಾ ರಹಾನೆ (18) ಹಾಗೂ ರಘವಂಶಿ (22) ದನ್ ಪೇರಿಸಿ ಗೆಲುವಿಗೆ ಮುನ್ನುಡಿ ಬರೆದರು, ಅತ್ಯುತ್ತಮ ಪ್ರದರ್ಶನ ತೋರಿದ ಡಿಕಾಕ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 hours ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

4 hours ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

17 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago