ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

5 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

5 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

17 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

17 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

17 hours ago