ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್ ಫಾರ್ ಡೆಮೊಕ್ರಟಿಕ್ ರಿಫಾರ್ಮ್ಸ್ (ಎಡಿಆರ್) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯದ ಇಂಡಸ್ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್ ಕುಮಾರ್ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.
ಟಾಪ್ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ನ ಬೈರತಿ ಸುರೇಶ್ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.
ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.
ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.
ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.
100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.
ಅತಿ ಹೆಚ್ಚು ಸಾಲ ಹೊಂದಿರುವ ಟಾಪ್ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…