ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

4 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

15 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

15 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

20 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago