ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

6 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

6 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

7 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

10 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago