ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

6 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

10 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

10 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

13 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago