ಡಿಕೆಶಿ ದೇಶದ ಎರಡನೇ ಅತ್ಯಂತ ಶ್ರೀಮಂತ ಶಾಸಕ: ಡಿಕೆಶಿ ಆಸ್ತಿ ಮೌಲ್ಯ ಎಷ್ಟು..? ಹಾಗಾದರೆ, ನಂ.1 ಶ್ರೀಮಂತ ಶಾಸಕ ಯಾರು…? ಇಲ್ಲಿದೆ ಮಾಹಿತಿ ಓದಿ…

ಭಾರತದ ಎಲ್ಲಾ ರಾಜ್ಯಗಳ ಶಾಸಕರ ಸಂಪತ್ತಿನ ಕುರಿತ ವರದಿ ಹೊರಬಿದ್ದಿದೆ. ಅಸೋಸಿಯೇಷನ್‌ ಫಾರ್‌ ಡೆಮೊಕ್ರಟಿಕ್‌ ರಿಫಾರ್ಮ್ಸ್‌ (ಎಡಿಆರ್‌) 28 ರಾಜ್ಯ, 3 ಕೇಂದ್ರಾಡಳಿತ ಪ್ರದೇಶದಲ್ಲಿನ ಒಟ್ಟು 4092 ಶಾಸಕರ ಆಸ್ತಿ ಅಧ್ಯಯನದ ಮಾಡಿ ಈ ವರದಿ ಬಿಡುಗಡೆ ಮಾಡಿದೆ.

ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 1,413 ಕೋಟಿ ರೂ. ಆಸ್ತಿಯೊಂದಿಗೆ 2ನೇ ಸ್ಥಾನ ಗಿಟ್ಟಿಸಿಕೊಂಡಿದ್ದು, ಮುಂಬೈನ ಘಾಟ್ಕೋಪರ್‌ ಕ್ಷೇತ್ರ ಪ್ರತಿನಿಧಿಸುವ ಬಿಜೆಪಿಯ ಪರಾಗ್‌ ಶಾ 3383 ಕೋಟಿ ರೂ. ಆಸ್ತಿಯೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ.

ಪಶ್ಚಿಮ ಬಂಗಾಳ ರಾಜ್ಯದ ಇಂಡಸ್‌ ಕ್ಷೇತ್ರದ ಬಿಜೆಪಿ ಶಾಸಕ ನಿರ್ಮಲ್‌ ಕುಮಾರ್‌ ಧಾರಾ ಅವರು ಅತ್ಯಂತ ಬಡ ಶಾಸಕರಾಗಿದ್ದಾರೆ. ಇವರು ಕೇವಲ 1,700 ರೂ. ಹೊಂದಿದ್ದಾರೆ.

ಟಾಪ್‌ 10 ಶ್ರೀಮಂತರಲ್ಲಿ ಕರ್ನಾಟಕದ ನಾಲ್ವರು ಸ್ಥಾನ ಪಡೆದಿದ್ದಾರೆ. ಗೌರಿಬಿದನೂರು ಕ್ಷೇತ್ರದ ಪಕ್ಷೇತರ ಶಾಸಕ ಕೆ.ಎಚ್‌.ಪುಟ್ಟಸ್ವಾಮಿ ಗೌಡ 1,267 ಕೋಟಿ ಆಸ್ತಿಯೊಂದಿಗೆ 3ನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್‌ನ ಪ್ರಿಯಾಕೃಷ್ಣ 1156 ಕೋಟಿ ರು.ನೊಂದಿಗೆ 4ನೇ ಸ್ಥಾನದಲ್ಲಿ ಮತ್ತು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್‌ನ ಬೈರತಿ ಸುರೇಶ್‌ 648 ಕೋಟಿ ರು.ನೊಂದಿಗೆ 10ನೇ ಸ್ಥಾನ ಪಡೆದಿದ್ದಾರೆ.

ಕರ್ನಾಟಕದ 223 ಶಾಸಕರ ಒಟ್ಟು ಆಸ್ತಿ 14,179 ಕೋಟಿ ರು.ನಷ್ಟಿದೆ. ಈ ಮೂಲಕ ದೇಶದಲ್ಲಿ ಶಾಸಕರ ಒಟ್ಟಾರೆ ಆಸ್ತಿ ಮೌಲ್ಯದ ಪಟ್ಟಿಯಲ್ಲಿ ಕರ್ನಾಟಕ ನಂ.1 ಸ್ಥಾನದಲ್ಲಿದೆ.

ನಂತರದ ಸ್ಥಾನದಲ್ಲಿರುವ ಮಹಾರಾಷ್ಟ್ರ (286 ಶಾಸಕರು)12,424 ಕೋಟಿ ರೂ., ಆಂಧ್ರಪ್ರದೇಶದ (174 ಶಾಸಕರು) ಶಾಸಕರು 11, 323 ಕೋಟಿ ರೂ. ಒಟ್ಟಾರೆ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇನ್ನು ಶಾಸಕರ ಸರಾಸರಿ ಆಸ್ತಿಯಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನ ಪಡೆದುಕೊಂಡಿದೆ. ಆಂಧ್ರಪ್ರದೇಶದ ಶಾಸಕರು 65.07 ಕೋಟಿ ರೂ. ಆಸ್ತಿ ಹೊಂದುವ ಮೂಲಕ ನಂ.1 ಸ್ಥಾನದಲ್ಲಿದ್ದಾರೆ. 63.58 ಕೋಟಿ ರೂ. ಸರಾಸರಿ ಆಸ್ತಿಯೊಂದಿಗೆ ಕರ್ನಾಟಕದ ಶಾಸಕರು 2ನೇ ಸ್ಥಾನದಲ್ಲಿದ್ದಾರೆ. 3ನೇ ಸ್ಥಾನದಲ್ಲಿರುವ ಮಹಾರಾಷ್ಟ್ರದ ಶಾಸಕರ ಸರಾಸರಿ ಆಸ್ತಿ 43.44 ಕೋಟಿ ರೂ. ಆಗಿದೆ.

100 ಕೋಟಿ ರು.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ ಅತಿ ಹೆಚ್ಚು ಶಾಸಕರು ಕರ್ನಾಟಕದಲ್ಲಿ ಇದ್ದಾರೆ. ಕರ್ನಾಟಕದ 31 ಶಾಸಕರ ಆಸ್ತಿ 100 ಕೋಟಿ ರು.ಗಿಂತಲೂ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಆಂಧ್ರಪ್ರದೇಶ (27), ಮಹಾರಾಷ್ಟ್ರ (18 ಶಾಸಕರು) ರಾಜ್ಯಗಳಿವೆ.

ಅತಿ ಹೆಚ್ಚು ಸಾಲ ಹೊಂದಿರುವ ಟಾಪ್‌ 10 ಶಾಸಕರ ಪೈಕಿ ಕರ್ನಾಟಕದ ಮೂವರು ಸ್ಥಾನ ಪಡೆದಿದ್ದಾರೆ. ಪ್ರಿಯಾಕೃಷ್ಣ 881 ಕೋಟಿ ರು.ನೊಂದಿಗೆ ಮೊದಲ ಸ್ಥಾನದಲ್ಲಿ, ಡಿ.ಕೆ.ಶಿವಕುಮಾರ್‌ 245 ಕೋಟಿ ರು.ನೊಂದಿಗೆ 3ನೇ ಸ್ಥಾನ ಮತ್ತು ಬೈರತಿ ಸುರೇಶ್‌ 114 ಕೋಟಿ ರು.ಸಾಲದೊಂದಿಗೆ 10ನೇ ಸ್ಥಾನದಲ್ಲಿದ್ದಾರೆ.

Ramesh Babu

Journalist

Recent Posts

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

9 hours ago

ಅರಣ್ಯದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಿ ಮಾನವೀಯತೆ ಮೆರೆದ ಇನ್ಸ್‌ಪೆಕ್ಟರ್ ಅಮರೇಶ್ ಗೌಡ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…

11 hours ago

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ‌ ವಿಚಾರ: ಬೆಲೆ ಏರಿಕೆ ಹಿಂಪಡೆಯಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…

12 hours ago

ಬೆಂ ಗ್ರಾ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ತಡೆ: ಜಿಲ್ಲಾಧಿಕಾರಿ ಡಾ. ಅನುರಾಧ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…

12 hours ago

ಸಾರ್ವಜನಿಕ ಆಡಳಿತದ ದಕ್ಷತೆ ಹೆಚ್ಚಿಸಲು ಕೆಜಿಐಎಸ್-2.0 ಸಹಕಾರಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧಾ

ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…

14 hours ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

20 hours ago