ನಿನ್ನೆ(ಡಿ.5) ರಾತ್ರಿ ಚರ್ಚ್ (ನಗರ ಪೊಲೀಸ್ ಠಾಣೆ) ಬಳಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಪವನ್ (28) ಯುವಕನ ಕೊಲೆಯಾದ ಯುವಕ. ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ.
ಘಟನೆ ವಿವರ
ಮೃತ ಯುವಕ ಪವನ್ ನಿನ್ನೆ ರಾತ್ರಿ ಸುಮಾರು 10:15ರ ಸಮಯದಲ್ಲಿ ಆಟೋ ಚಾಲನೆ ಮಾಡಿಕೊಂಡು ಡಿಕ್ರಾಸ್ ಕಡೆಯಿಂದ ಟಿಬಿ ವೃತ್ತದ ಕಡೆಗೆ ಬರುವ ವೇಳೆ ಚರ್ಚ್ ಬಳಿ ಆಟೋವನ್ನು ಹಿಂಬಾಲಿಸಿಕೊಂಡು ಬಂದ ಸ್ವಿಫ್ಟ್ ಕಾರೊಂದು ಅಡ್ಡಗಟ್ಟುತ್ತದೆ. ಆಟೋ ನಿಲ್ಲಿಸಿದ ತಕ್ಷಣ ಕಾರಿನಲ್ಲಿದ್ದ ನಾಲ್ಕು ಜನ ಗ್ಯಾಂಗ್ ಪವನ್ ನನ್ನು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೈ, ಎದೆಭಾಗ, ಮುಖ ಹಾಗೂ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ..
ರಕ್ತದ ಮಡುವಿನಲ್ಲಿ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯ ಡಿವೈಡರ್ ಮೇಲೆ ಪವನ್ ಮೃತ ದೇಹ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ಪಾಂಡುರಂಗ, ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಸದ್ಯ ಕೊಲೆ ಆರೋಪಿಗಳು ಪರಾರಿಯಾಗಿದ್ದು, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದಾಗಿ ಮಾಹಿತಿ ತಿಳಿದು ಬಂದಿದೆ….
ನಗರ ಪೊಲೀಸ್ ಠಾಣೆ ಹಾಗೂ ಡಿವೈಎಸ್ ಪಿ ಕಚೇರಿಯ ಕೂಗಳತೆ ದೂರದಲ್ಲಿರುವ ಚರ್ಚ್ ಪಕ್ಕದಲ್ಲೇ ಹಾದುಹೋಗಿರುವ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ….
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…