ನಿನ್ನೆ(ಡಿ.5) ರಾತ್ರಿ ಚರ್ಚ್ (ನಗರ ಪೊಲೀಸ್ ಠಾಣೆ) ಬಳಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಪವನ್ (28) ಯುವಕನ ಕೊಲೆಯಾದ ಯುವಕ. ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ.
ಘಟನೆ ವಿವರ
ಮೃತ ಯುವಕ ಪವನ್ ನಿನ್ನೆ ರಾತ್ರಿ ಸುಮಾರು 10:15ರ ಸಮಯದಲ್ಲಿ ಆಟೋ ಚಾಲನೆ ಮಾಡಿಕೊಂಡು ಡಿಕ್ರಾಸ್ ಕಡೆಯಿಂದ ಟಿಬಿ ವೃತ್ತದ ಕಡೆಗೆ ಬರುವ ವೇಳೆ ಚರ್ಚ್ ಬಳಿ ಆಟೋವನ್ನು ಹಿಂಬಾಲಿಸಿಕೊಂಡು ಬಂದ ಸ್ವಿಫ್ಟ್ ಕಾರೊಂದು ಅಡ್ಡಗಟ್ಟುತ್ತದೆ. ಆಟೋ ನಿಲ್ಲಿಸಿದ ತಕ್ಷಣ ಕಾರಿನಲ್ಲಿದ್ದ ನಾಲ್ಕು ಜನ ಗ್ಯಾಂಗ್ ಪವನ್ ನನ್ನು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೈ, ಎದೆಭಾಗ, ಮುಖ ಹಾಗೂ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ..
ರಕ್ತದ ಮಡುವಿನಲ್ಲಿ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯ ಡಿವೈಡರ್ ಮೇಲೆ ಪವನ್ ಮೃತ ದೇಹ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ಪಾಂಡುರಂಗ, ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….
ಸದ್ಯ ಕೊಲೆ ಆರೋಪಿಗಳು ಪರಾರಿಯಾಗಿದ್ದು, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದಾಗಿ ಮಾಹಿತಿ ತಿಳಿದು ಬಂದಿದೆ….
ನಗರ ಪೊಲೀಸ್ ಠಾಣೆ ಹಾಗೂ ಡಿವೈಎಸ್ ಪಿ ಕಚೇರಿಯ ಕೂಗಳತೆ ದೂರದಲ್ಲಿರುವ ಚರ್ಚ್ ಪಕ್ಕದಲ್ಲೇ ಹಾದುಹೋಗಿರುವ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ….
ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…