ಚರ್ಚ್ ಬಳಿ ಯುವಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸಿ.ಕೆ ಬಾಬಾ ಭೇಟಿ ಪರಿಶೀಲನೆ

ನಿನ್ನೆ(ಡಿ.5) ರಾತ್ರಿ ಚರ್ಚ್ (ನಗರ ಪೊಲೀಸ್ ಠಾಣೆ) ಬಳಿ ನಡೆದ ಯುವಕನ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ಜಾಲಪ್ಪ ಕಾಲೇಜ್ ಬಳಿಯ ನಿವಾಸಿ ಪವನ್ (28) ಯುವಕನ ಕೊಲೆಯಾದ ಯುವಕ. ವೃತ್ತಿಯಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ.

ಘಟನೆ ವಿವರ 

ಮೃತ ಯುವಕ ಪವನ್ ನಿನ್ನೆ ರಾತ್ರಿ ಸುಮಾರು 10:15ರ ಸಮಯದಲ್ಲಿ ಆಟೋ ಚಾಲನೆ ಮಾಡಿಕೊಂಡು ಡಿಕ್ರಾಸ್ ಕಡೆಯಿಂದ ಟಿಬಿ ವೃತ್ತದ ಕಡೆಗೆ ಬರುವ ವೇಳೆ ಚರ್ಚ್ ಬಳಿ ಆಟೋವನ್ನು ಹಿಂಬಾಲಿಸಿಕೊಂಡು ಬಂದ ಸ್ವಿಫ್ಟ್ ಕಾರೊಂದು ಅಡ್ಡಗಟ್ಟುತ್ತದೆ. ಆಟೋ ನಿಲ್ಲಿಸಿದ ತಕ್ಷಣ ಕಾರಿನಲ್ಲಿದ್ದ ನಾಲ್ಕು ಜನ ಗ್ಯಾಂಗ್ ಪವನ್ ನನ್ನು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೈ, ಎದೆಭಾಗ, ಮುಖ ಹಾಗೂ ದೇಹದ ಇತರೆ ಭಾಗಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ಒದಗಿಬಂದಿದೆ..

ರಕ್ತದ ಮಡುವಿನಲ್ಲಿ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯ ಡಿವೈಡರ್ ಮೇಲೆ ಪವನ್ ಮೃತ ದೇಹ ಬಿದ್ದಿದ್ದು, ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ ಬಾಬಾ ಹಾಗೂ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ ಪಿ ಪಾಂಡುರಂಗ, ಪೊಲೀಸ್ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ….

ಸದ್ಯ ಕೊಲೆ ಆರೋಪಿಗಳು ಪರಾರಿಯಾಗಿದ್ದು, ಹತ್ಯೆಗೈದು ಪರಾರಿಯಾಗಿರುವ ಆರೋಪಿಗಳ ಪತ್ತೆಗಾಗಿ ಪೊಲೀಸರ ತಂಡ ಬೆನ್ನತ್ತಿರುವುದಾಗಿ ಮಾಹಿತಿ ತಿಳಿದು ಬಂದಿದೆ….

ನಗರ ಪೊಲೀಸ್ ಠಾಣೆ ಹಾಗೂ ಡಿವೈಎಸ್ ಪಿ ಕಚೇರಿಯ ಕೂಗಳತೆ ದೂರದಲ್ಲಿರುವ ಚರ್ಚ್ ಪಕ್ಕದಲ್ಲೇ ಹಾದುಹೋಗಿರುವ ಯಲಹಂಕ-ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ….

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…….

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

33 minutes ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 hour ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

13 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

13 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

13 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

21 hours ago