ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ ನಗರದ ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ನಡೆದಿತ್ತು. ಈ ಭೀಕರ ಅಪಘಾತದ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ…
ಮೃತನನ್ನು ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆ ನಿವಾಸಿ ರಾಜು (26) ಎಂದು ಗುರುತಿಸಲಾಗಿದ್ದು, ಈತ ಬೈಕಿನಲ್ಲಿ ಹಳೇ ಬಸ್ ನಿಲ್ದಾಣ ಕಡೆಯಿಂದ ಡಿಕ್ರಾಸ್ ಕಡೆಗೆ ಹೆಲ್ಮೆಟ್ ಧರಿಸದೇ ಅತಿವೇಗದಿಂದ ಬಂದು ನಿಂತಿದ್ದ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಟಾಟಾ ಏಸ್ ಅಡಿಯಲ್ಲಿ ದೇಹ ಸಿಲುಕಿಕೊಂಡರೆ, ಬೈಕ್ ಒಂದಷ್ಟು ಮೀಟರ್ ದೂರದವರೆಗೆ ಜಾರಿ ಹೋಗಿದೆ…
ಬೈಕ್ ಸವಾರನ ಸಾವಿಗೆ ಕಾರಣ ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲನೆ ಮಾಡಿರುವ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ…
ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಭರಸಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಬಿದ್ದ ತಕ್ಷಣ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ.
ಬೈಕ್ ಚಾಲನೆಯ ವೇಳೆ ಕೆಲವೊಮ್ಮೆ ನಾವು ಸಣ್ಣ ಸಂಗತಿಗಳನ್ನೂ ನಿರ್ಲಕ್ಷಿಸುತ್ತೇವೆ. ಆದರೆ, ಈ ಸಂಗತಿಗಳೇ ಕೆಲವೊಮ್ಮೆ ಅಪಘಾತಕ್ಕೂ ಕಾರಣವಾಗುತ್ತವೆ. ಹೀಗಾಗಿ ವಾಹನ ಚಾಲನೆಯ ವೇಳೆ ನಮ್ಮ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಹೆಲ್ಮೆಟ್ಗಳು ಬೈಕ್ ಸವಾರರಿಗೆ ಪ್ರಮುಖ ಜೀವರಕ್ಷಕ ಸಾಧನವೂ ಹೌದು. ಹೀಗಾಗಿ ಯಾವಾಗಲೂ ಗುಣಮಟ್ಟದ ಹೆಲ್ಮೆಟ್ ಧರಿಸಿ. ವೇಗದ ಮೇಲೆ ನಿಗಾ ಇರಲಿ. ಹಾಗೂ ಯಾವುದೇ ವಾಹನ ಚಾಲನೆ ಮಾಡುವಾಗ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ….
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…