ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ಬೈಕ್ ಅಪಘಾತದಲ್ಲಿ ಸವಾರ ದುರ್ಮರಣ ಪ್ರಕರಣ: ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ ನಗರದ ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ನಡೆದಿತ್ತು. ಈ ಭೀಕರ ಅಪಘಾತದ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ…

ಮೃತನನ್ನು ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆ ನಿವಾಸಿ ರಾಜು (26) ಎಂದು ಗುರುತಿಸಲಾಗಿದ್ದು, ಈತ ಬೈಕಿನಲ್ಲಿ ಹಳೇ ಬಸ್ ನಿಲ್ದಾಣ ಕಡೆಯಿಂದ ಡಿಕ್ರಾಸ್ ಕಡೆಗೆ ಹೆಲ್ಮೆಟ್ ಧರಿಸದೇ ಅತಿವೇಗದಿಂದ ಬಂದು ನಿಂತಿದ್ದ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಟಾಟಾ ಏಸ್ ಅಡಿಯಲ್ಲಿ ದೇಹ ಸಿಲುಕಿಕೊಂಡರೆ, ಬೈಕ್ ಒಂದಷ್ಟು ಮೀಟರ್ ದೂರದವರೆಗೆ ಜಾರಿ ಹೋಗಿದೆ…

ಬೈಕ್ ಸವಾರನ ಸಾವಿಗೆ ಕಾರಣ ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲನೆ ಮಾಡಿರುವ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ…

ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಭರಸಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಬಿದ್ದ ತಕ್ಷಣ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿತ್ತು.‌ ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ.

ಬೈಕ್ ಚಾಲನೆಯ ವೇಳೆ ಕೆಲವೊಮ್ಮೆ ನಾವು ಸಣ್ಣ ಸಂಗತಿಗಳನ್ನೂ ನಿರ್ಲಕ್ಷಿಸುತ್ತೇವೆ. ಆದರೆ, ಈ ಸಂಗತಿಗಳೇ ಕೆಲವೊಮ್ಮೆ ಅಪಘಾತಕ್ಕೂ ಕಾರಣವಾಗುತ್ತವೆ. ಹೀಗಾಗಿ ವಾಹನ ಚಾಲನೆಯ ವೇಳೆ ನಮ್ಮ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಹೆಲ್ಮೆಟ್‌ಗಳು ಬೈಕ್ ಸವಾರರಿಗೆ ಪ್ರಮುಖ ಜೀವರಕ್ಷಕ ಸಾಧನವೂ ಹೌದು. ಹೀಗಾಗಿ ಯಾವಾಗಲೂ ಗುಣಮಟ್ಟದ ಹೆಲ್ಮೆಟ್ ಧರಿಸಿ. ವೇಗದ ಮೇಲೆ ನಿಗಾ ಇರಲಿ‌. ಹಾಗೂ ಯಾವುದೇ ವಾಹನ ಚಾಲನೆ ಮಾಡುವಾಗ ಸಂಚಾರ ನಿಯಮ‌ಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ….

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 hour ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago