ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ ನಗರದ ಡಿಕ್ರಾಸ್-ಹಳೇ ಬಸ್ ನಿಲ್ದಾಣ ರಸ್ತೆಯಲ್ಲಿ ನಡೆದಿತ್ತು. ಈ ಭೀಕರ ಅಪಘಾತದ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ…
ಮೃತನನ್ನು ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆ ನಿವಾಸಿ ರಾಜು (26) ಎಂದು ಗುರುತಿಸಲಾಗಿದ್ದು, ಈತ ಬೈಕಿನಲ್ಲಿ ಹಳೇ ಬಸ್ ನಿಲ್ದಾಣ ಕಡೆಯಿಂದ ಡಿಕ್ರಾಸ್ ಕಡೆಗೆ ಹೆಲ್ಮೆಟ್ ಧರಿಸದೇ ಅತಿವೇಗದಿಂದ ಬಂದು ನಿಂತಿದ್ದ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ಟಾಟಾ ಏಸ್ ಅಡಿಯಲ್ಲಿ ದೇಹ ಸಿಲುಕಿಕೊಂಡರೆ, ಬೈಕ್ ಒಂದಷ್ಟು ಮೀಟರ್ ದೂರದವರೆಗೆ ಜಾರಿ ಹೋಗಿದೆ…
ಬೈಕ್ ಸವಾರನ ಸಾವಿಗೆ ಕಾರಣ ಹೆಲ್ಮೆಟ್ ಧರಿಸದೇ ಅತಿವೇಗವಾಗಿ ಬೈಕ್ ಚಾಲನೆ ಮಾಡಿರುವ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ…
ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಭರಸಕ್ಕೆ ಬೈಕ್ ಕೆಳಗೆ ಬಿದ್ದಿದ್ದು, ಬಿದ್ದ ತಕ್ಷಣ ಹೆಲ್ಮೆಟ್ ಧರಿಸದ ಕಾರಣ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸ್ರಾವದಿಂದ ಬಳಲುತ್ತಿದ್ದ, ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾನೆ.
ಬೈಕ್ ಚಾಲನೆಯ ವೇಳೆ ಕೆಲವೊಮ್ಮೆ ನಾವು ಸಣ್ಣ ಸಂಗತಿಗಳನ್ನೂ ನಿರ್ಲಕ್ಷಿಸುತ್ತೇವೆ. ಆದರೆ, ಈ ಸಂಗತಿಗಳೇ ಕೆಲವೊಮ್ಮೆ ಅಪಘಾತಕ್ಕೂ ಕಾರಣವಾಗುತ್ತವೆ. ಹೀಗಾಗಿ ವಾಹನ ಚಾಲನೆಯ ವೇಳೆ ನಮ್ಮ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಹೆಲ್ಮೆಟ್ಗಳು ಬೈಕ್ ಸವಾರರಿಗೆ ಪ್ರಮುಖ ಜೀವರಕ್ಷಕ ಸಾಧನವೂ ಹೌದು. ಹೀಗಾಗಿ ಯಾವಾಗಲೂ ಗುಣಮಟ್ಟದ ಹೆಲ್ಮೆಟ್ ಧರಿಸಿ. ವೇಗದ ಮೇಲೆ ನಿಗಾ ಇರಲಿ. ಹಾಗೂ ಯಾವುದೇ ವಾಹನ ಚಾಲನೆ ಮಾಡುವಾಗ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು ಎಂದು ಪೊಲೀಸ್ ಇಲಾಖೆ ಮನವಿ ಮಾಡಿದೆ….
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…