Categories: Home

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣ: ಕಾಮಕಾಂಡದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡುತ್ತಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಬೆಳಕಿಗೆ ಬಂದಿವೆ.

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿದೆ.

ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್‌ ಇಲಾಖೆಗೆ ತೀವ್ರ ಮುಜುಗರ ತಂದಿದೆ.

Ramesh Babu

Journalist

Recent Posts

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

2 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

3 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

4 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

5 hours ago

ಇ-ಸ್ವತ್ತು ಅರ್ಜಿ ಸಲ್ಲಿಕೆಗೆ ಬಾಪೂಜಿ ಸೇವಾ ಕೇಂದ್ರ (ಗ್ರಾಮ ಒನ್), ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಸೌಲಭ್ಯ

ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…

11 hours ago