Categories: Home

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣ: ಕಾಮಕಾಂಡದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತ

ಡಿಜಿಪಿ ಶ್ರೇಣಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಡಿಜಿಪಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಸರಸವಾಡುತ್ತಿರುವ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಡಿಜಿಪಿ ರಾಮಚಂದ್ರ ರಾವ್ ಅವರು ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ರನ್ಯಾ ರಾವ್‌ ಅವರ ಮಲ ತಂದೆಯಾಗಿದ್ದಾರೆ. ಪುತ್ರಿಯ ಕೇಸ್‌ನಲ್ಲಿ ಇವರಿಗೆ ಸಂಕಷ್ಟ ಎದುರಾಗಿತ್ತು. ಇದೀಗ ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸವಾಡಿರುವ ವಿಡಿಯೊಗಳು ಬೆಳಕಿಗೆ ಬಂದಿವೆ.

ವೈರಲ್ ಆಗಿರುವ ವಿಡಿಯೊಗಳಲ್ಲಿ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲಿ, ಸಮವಸ್ತ್ರದಲ್ಲಿರುವಾಗಲೇ ಹಲವು ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಕಂಡುಬಂದಿದೆ. ಮಾಡೆಲ್ ಸೇರಿ ಹಲವು ಮಹಿಳೆಯರ ಜತೆ ಸರಸವಾಡಿರುವ ವಿಡಿಯೊ ವೈರಲ್‌ ಆಗಿದೆ.

ಕಚೇರಿಗೆ ಕೆಲಸದ ನಿಮಿತ್ತ ಬರುವ ಮಹಿಳೆಯರ ಜತೆಗೆ ಈ ಅಧಿಕಾರಿ ಸರಸವಾಡುತ್ತಿದ್ದರು ಎನ್ನಲಾಗುತ್ತಿದ್ದು, ಅವರ ಕಾಮಕಾಂಡದ ವಿಡಿಯೊಗಳು ಈಗ ಹೊರಬಂದಿವೆ.

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಉನ್ನತ ಅಧಿಕಾರಿಯೇ ಇಂತಹ ಕೃತ್ಯದಲ್ಲಿ ಭಾಗಿಯಾಗಿರುವುದು ಪೊಲೀಸ್‌ ಇಲಾಖೆಗೆ ತೀವ್ರ ಮುಜುಗರ ತಂದಿದೆ.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

9 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

1 day ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

1 day ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

4 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago