ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಜನರಲ್ ಗುರ್ಬಿರ್ ಪಾಲ್ ಸಿಂಗ್ ಅವರು ಜಿ.ಹಿತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿಗಳ ಮಗನಾದ ಜಿ.ಹಿತೇಶ್ ದೆಹಲಿಯಲ್ಲಿ 2024 ನೇ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…