ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್ ಜನರಲ್ ಗುರ್ಬಿರ್ ಪಾಲ್ ಸಿಂಗ್ ಅವರು ಜಿ.ಹಿತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ ದಂಪತಿಗಳ ಮಗನಾದ ಜಿ.ಹಿತೇಶ್ ದೆಹಲಿಯಲ್ಲಿ 2024 ನೇ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…