ಡಿಜಿ ಎನ್.ಸಿ.ಸಿ ಪ್ರಶಸ್ತಿ ಪಡೆದ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್

ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ‌ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಜನರಲ್‌ ಗುರ್ಬಿರ್‌ ಪಾಲ್‌ ಸಿಂಗ್‌ ಅವರು ಜಿ.ಹಿತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ  ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ  ದಂಪತಿಗಳ ಮಗನಾದ ಜಿ.ಹಿತೇಶ್       ದೆಹಲಿಯಲ್ಲಿ 2024 ನೇ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯದ. ಎನ್.ಸಿ.ಸಿ ತಂಡವನ್ನು ಪ್ರತಿನಿಧಿಸಿದ್ದ ಜಿ.ಹಿತೇಶ್ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಆಯ್ಕೆಯಾಗಿದ್ದರು. ಘಟಂ ಮತ್ತು ತಬಲ ವಾದಕನಾಗಿ ನೂರಾರು ಕಾರ್ಯಕ್ರಮಗಳಲ್ಲಿ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಇದೀಗಾ ಡಿಜಿ ಎನ್.ಸಿ.ಸಿ ಪ್ರಶಸ್ತಿಗೂ ಪುರಸ್ಕೃತರಾಗಿದ್ದಾರೆ.

ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

4 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

6 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

9 hours ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

24 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 day ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

1 day ago