ಡಿಜಿ ಎನ್.ಸಿ.ಸಿ ಪ್ರಶಸ್ತಿ ಪಡೆದ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್

ದೊಡ್ಡಬಳ್ಳಾಪುರ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜಿನ‌ ಎನ್.ಸಿ.ಸಿ ವಿದ್ಯಾರ್ಥಿ ಜಿ.ಹಿತೇಶ್ ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮತ್ತು ಪ್ರತಿಭೆಗಾಗಿ ಡಿಜಿ ಎನ್.ಸಿ.ಸಿ ಪ್ರಶಸ್ತಿಗೆ ಪುರಸ್ಕೃತರಾಗಿದ್ದಾರೆ.

ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುವ ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ನೀಡುವ ಪ್ರಶಸ್ತಿ ಇದಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೆಫ್ಟಿನೆಂಟ್‌ ಜನರಲ್‌ ಗುರ್ಬಿರ್‌ ಪಾಲ್‌ ಸಿಂಗ್‌ ಅವರು ಜಿ.ಹಿತೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ  ಹೋಬಳಿಯ ಕಾಡನೂರು ಪಾಳ್ಯ ಗ್ರಾಮದ ಗೋವಿಂದರಾಜು ಮತ್ತು ಲಕ್ಷ್ಮಮ್ಮ  ದಂಪತಿಗಳ ಮಗನಾದ ಜಿ.ಹಿತೇಶ್       ದೆಹಲಿಯಲ್ಲಿ 2024 ನೇ ಜನವರಿ 26ರಂದು ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯದ. ಎನ್.ಸಿ.ಸಿ ತಂಡವನ್ನು ಪ್ರತಿನಿಧಿಸಿದ್ದ ಜಿ.ಹಿತೇಶ್ ಶ್ರೀಕೊಂಗಾಡಿಯಪ್ಪ ಕಾಲೇಜು ಎನ್.ಸಿ.ಸಿ ಘಟಕದಿಂದ ಆಯ್ಕೆಯಾಗಿದ್ದರು. ಘಟಂ ಮತ್ತು ತಬಲ ವಾದಕನಾಗಿ ನೂರಾರು ಕಾರ್ಯಕ್ರಮಗಳಲ್ಲಿ ಪ್ರತಿಭೆ ಪ್ರದರ್ಶನ ಮಾಡುವ ಮೂಲಕ ಯುವ ಕಲಾವಿದನಾಗಿ ಹಲವು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿದ್ದಾರೆ. ಇದೀಗಾ ಡಿಜಿ ಎನ್.ಸಿ.ಸಿ ಪ್ರಶಸ್ತಿಗೂ ಪುರಸ್ಕೃತರಾಗಿದ್ದಾರೆ.

ಜಿ.ಹಿತೇಶ್ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರ್ಕಾರಿ ಶಾಲೆಗಳಾದ ಕಾಡನೂರು ಪಾಳ್ಯ ಮತ್ತು ಮದಗೊಂಡನಹಳ್ಳಿ, ಪ್ರೌಢಶಾಲೆಯನ್ನು ಕಾಡನೂರು ಕೈಮರದ ಶ್ರೀರಾಮ ಪ್ರೌಢಶಾಲೆಯಲ್ಲಿ, ಪಿಯುಸಿ ಶಿಕ್ಷಣವನ್ನು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಪಡೆದಿದ್ದಾರೆ. ಪ್ರಸ್ತುತ ಬಿ.ಎ ಪದವಿ ವ್ಯಾಸಂಗವನ್ನು ಶ್ರೀ ಕೊಂಗಾಡಿಯಪ್ಪ ಕಾಲೇಜಿನಲ್ಲಿ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

7 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

9 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago