ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ

ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಜೆ-ಕೆಜಿ ಹಳ್ಳಿ ಗಲಭೆ ವಿಚಾರದಲ್ಲಿ ಪೊಲೀಸರ ಮೇಲೆ ದಾಳಿ, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿರೋದು, ಪುಲಕೇಶಿನಗರದಲ್ಲಿ ನಮ್ಮ ಸಂಘಟನೆಯ ಅಧ್ಯಕ್ಷ ಮುನೇಗೌಡರ ಮನೆ ಮೇಲೆ ದಾಳಿ ಬೈಕ್ ಸುಟ್ಟಿರುವುದು ಇದನ್ನೆಲ್ಲ ನೆನಪು ಮಾಡಿಕೊಳ್ಳದೆ ಅವರೆಲ್ಲ ಅಮಾಯಕರು ಅವರ ಕೇಸ್ ವಾಪಸ್ ಪಡೆಯಿರಿ ಎಂದು ಹೇಳುತ್ತಿರುವುದು ತಪ್ಪು ಎಂದು ತನ್ವೀರ್ ಸೇಠ್ ವಿರುದ್ಧ ಪ್ರವೀಣ್ ಶೆಟ್ಟಿ ಕಿಡಿಕಾರಿದ್ದಾರೆ.

ಕನ್ನಡಪರ ಹೋರಾಟಗಾರರು ರೈತ ಸಮಸ್ಯೆಗಳ ಬಗ್ಗೆ ನಾಡು ನುಡಿ ಬಗ್ಗೆ ಜಲ ಭಾಷೆಗಾಗಿ ನಾವು ಹೋರಾಟ ಮಾಡಿದ್ದೇವೆ. ನಮ್ಮ ಮೇಲೆ ಸಾಕಷ್ಟು ಕೇಸ್ ಹಾಕಲಾಗಿದೆ ಆಗ ನೀವು ಒಂದು ಮಾತು ಮಾತನಾಡಿಲ್ಲ. ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಸಾಕಷ್ಟು ಮನವಿ ಮಾಡಿದ್ದೇವೆ ಆದರೂ ವಾಪಸ್ ಪಡೆಯಲಿಲ್ಲ. ಬಿಜೆಪಿ ಸರ್ಕಾರವನ್ನ ಜನರು ಮನೆಗೆ ಕಳಿಸಿದ್ದಾರೆ. ಈಗ ಕಾಂಗ್ರೆಸ್ ಸರ್ಕಾರವಿದೆ ನೀವು ಕೂಡಾ ಈಗ ಇದೇ ಹಾದಿ ತುಳಿಯುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ನೀವು ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ನಾವು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡುತ್ತೇವೆ, ಈ ಕೂಡಲೇ ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ಕೇಸ್ ವಾಪಸ್ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

3 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

7 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

22 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

23 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago