ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ

ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಜೆ-ಕೆಜಿ ಹಳ್ಳಿ ಗಲಭೆ ವಿಚಾರದಲ್ಲಿ ಪೊಲೀಸರ ಮೇಲೆ ದಾಳಿ, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿರೋದು, ಪುಲಕೇಶಿನಗರದಲ್ಲಿ ನಮ್ಮ ಸಂಘಟನೆಯ ಅಧ್ಯಕ್ಷ ಮುನೇಗೌಡರ ಮನೆ ಮೇಲೆ ದಾಳಿ ಬೈಕ್ ಸುಟ್ಟಿರುವುದು ಇದನ್ನೆಲ್ಲ ನೆನಪು ಮಾಡಿಕೊಳ್ಳದೆ ಅವರೆಲ್ಲ ಅಮಾಯಕರು ಅವರ ಕೇಸ್ ವಾಪಸ್ ಪಡೆಯಿರಿ ಎಂದು ಹೇಳುತ್ತಿರುವುದು ತಪ್ಪು ಎಂದು ತನ್ವೀರ್ ಸೇಠ್ ವಿರುದ್ಧ ಪ್ರವೀಣ್ ಶೆಟ್ಟಿ ಕಿಡಿಕಾರಿದ್ದಾರೆ.

ಕನ್ನಡಪರ ಹೋರಾಟಗಾರರು ರೈತ ಸಮಸ್ಯೆಗಳ ಬಗ್ಗೆ ನಾಡು ನುಡಿ ಬಗ್ಗೆ ಜಲ ಭಾಷೆಗಾಗಿ ನಾವು ಹೋರಾಟ ಮಾಡಿದ್ದೇವೆ. ನಮ್ಮ ಮೇಲೆ ಸಾಕಷ್ಟು ಕೇಸ್ ಹಾಕಲಾಗಿದೆ ಆಗ ನೀವು ಒಂದು ಮಾತು ಮಾತನಾಡಿಲ್ಲ. ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಸಾಕಷ್ಟು ಮನವಿ ಮಾಡಿದ್ದೇವೆ ಆದರೂ ವಾಪಸ್ ಪಡೆಯಲಿಲ್ಲ. ಬಿಜೆಪಿ ಸರ್ಕಾರವನ್ನ ಜನರು ಮನೆಗೆ ಕಳಿಸಿದ್ದಾರೆ. ಈಗ ಕಾಂಗ್ರೆಸ್ ಸರ್ಕಾರವಿದೆ ನೀವು ಕೂಡಾ ಈಗ ಇದೇ ಹಾದಿ ತುಳಿಯುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ನೀವು ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ನಾವು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡುತ್ತೇವೆ, ಈ ಕೂಡಲೇ ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ಕೇಸ್ ವಾಪಸ್ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

27 minutes ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

7 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

19 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

19 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

20 hours ago