ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ

ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಜೆ-ಕೆಜಿ ಹಳ್ಳಿ ಗಲಭೆ ವಿಚಾರದಲ್ಲಿ ಪೊಲೀಸರ ಮೇಲೆ ದಾಳಿ, ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿರೋದು, ಪುಲಕೇಶಿನಗರದಲ್ಲಿ ನಮ್ಮ ಸಂಘಟನೆಯ ಅಧ್ಯಕ್ಷ ಮುನೇಗೌಡರ ಮನೆ ಮೇಲೆ ದಾಳಿ ಬೈಕ್ ಸುಟ್ಟಿರುವುದು ಇದನ್ನೆಲ್ಲ ನೆನಪು ಮಾಡಿಕೊಳ್ಳದೆ ಅವರೆಲ್ಲ ಅಮಾಯಕರು ಅವರ ಕೇಸ್ ವಾಪಸ್ ಪಡೆಯಿರಿ ಎಂದು ಹೇಳುತ್ತಿರುವುದು ತಪ್ಪು ಎಂದು ತನ್ವೀರ್ ಸೇಠ್ ವಿರುದ್ಧ ಪ್ರವೀಣ್ ಶೆಟ್ಟಿ ಕಿಡಿಕಾರಿದ್ದಾರೆ.

ಕನ್ನಡಪರ ಹೋರಾಟಗಾರರು ರೈತ ಸಮಸ್ಯೆಗಳ ಬಗ್ಗೆ ನಾಡು ನುಡಿ ಬಗ್ಗೆ ಜಲ ಭಾಷೆಗಾಗಿ ನಾವು ಹೋರಾಟ ಮಾಡಿದ್ದೇವೆ. ನಮ್ಮ ಮೇಲೆ ಸಾಕಷ್ಟು ಕೇಸ್ ಹಾಕಲಾಗಿದೆ ಆಗ ನೀವು ಒಂದು ಮಾತು ಮಾತನಾಡಿಲ್ಲ. ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಸಾಕಷ್ಟು ಮನವಿ ಮಾಡಿದ್ದೇವೆ ಆದರೂ ವಾಪಸ್ ಪಡೆಯಲಿಲ್ಲ. ಬಿಜೆಪಿ ಸರ್ಕಾರವನ್ನ ಜನರು ಮನೆಗೆ ಕಳಿಸಿದ್ದಾರೆ. ಈಗ ಕಾಂಗ್ರೆಸ್ ಸರ್ಕಾರವಿದೆ ನೀವು ಕೂಡಾ ಈಗ ಇದೇ ಹಾದಿ ತುಳಿಯುತ್ತಿದ್ದೀರಾ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲು ನೀವು ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ನಾವು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಮಾಡುತ್ತೇವೆ, ಈ ಕೂಡಲೇ ಕನ್ನಡಪರ ಹೋರಾಟಗಾರರು ಹಾಗೂ ರೈತರ ಮೇಲಿನ ಕೇಸ್ ವಾಪಸ್ ಪಡೆಯಬೇಕು, ಕೇಸ್ ವಾಪಸ್ ಪಡೆಯದೇ ಇದ್ದರೆ ರಾಜ್ಯವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

44 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago