ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ….- ಎಚ್ ಡಿಕೆ.

ಡಿಸಿಎಂ ಡಿಕೆ ಶಿವಕುಮಾರ್ ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಮಂತ್ರಿ ಎಚ್ ಡಿಕೆ ಹೇಳಿದ್ದಾರೆ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು..

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ..

ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು..

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?

ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

2 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

19 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago