ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ….- ಎಚ್ ಡಿಕೆ.

ಡಿಸಿಎಂ ಡಿಕೆ ಶಿವಕುಮಾರ್ ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಮಂತ್ರಿ ಎಚ್ ಡಿಕೆ ಹೇಳಿದ್ದಾರೆ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು..

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ..

ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು..

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?

ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

36 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

4 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago