ಡಿಸಿಎಂ ಡಿಕೆ ಶಿವಕುಮಾರ್ ರವರೇ.. ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ….- ಎಚ್ ಡಿಕೆ.

ಡಿಸಿಎಂ ಡಿಕೆ ಶಿವಕುಮಾರ್ ರವರೇ..
ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ ಎಂದು ಕೇಂದ್ರ ಮಂತ್ರಿ ಎಚ್ ಡಿಕೆ ಹೇಳಿದ್ದಾರೆ.

ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ.

ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ @ ಉಪ ಮುಖ್ಯಮಂತ್ರಿ!

ನಮ್ಮಿಬ್ಬರ ಆಡಳಿತಾನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು..

ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ..

ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ.

ನಿಮಗೆ ಭೂ ಕಬ್ಜ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದು..

ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!??

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ?

ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕೇ ನಾನು ಹೇಳಿದ್ದು; ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು. ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರ?

ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ಹೇಳಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

8 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

21 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago