Categories: ಕೋಲಾರ

ಡಿಸಿಸಿ ಬ್ಯಾಂಕ್, ಕೋಮುಲ್ ಭ್ರಷ್ಟಾಚಾರ ಸಿಬಿಐ ತನಿಖೆಗೆ ಒತ್ತಾಯಿಸಿ ಮನವಿ

ಕೋಲಾರ: ಡಿ.ಸಿ.ಸಿ ಬ್ಯಾಂಕ್ ಮತ್ತು ಹಾಲು ಒಕ್ಕೂಟದಲ್ಲಿ ನೂರಾರು ಕೋಟಿ ಬಡವರ ಹಣ ಲೂಟಿ ಮಾಡಿದ್ದು ಸಿಬಿಐಗೆ ಒಪ್ಪಿಸಬೇಕೆಂದು ರೈತ ಸಂಘದಿಂದ ಸಹಕಾರ ಸಚಿವ ರಾಜಣ್ಣ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ, ಜಿಲ್ಲೆಯ ಲಕ್ಷಾಂತರ ರೈತ ಮಹಿಳೆಯರ ಜೀವನಾಡಿಯ ಜೊತೆಗೆ ಎರಡು ಕಣ್ಣುಗಳಾಗಿರುವ ಬ್ಯಾಂಕ್ ಹಾಗೂ ಹಾಲು ಒಕ್ಕೂಟದಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ನೂರಾರು ಕೋಟಿ ಕದ್ದವರು ಯಾರು ಎಂಬುದು ಸಾರ್ವಜನಿಕರಿಗೆ ತಿಳಿಯಬೇಕಿದೆ ಬಡವರ ಹಣವನ್ನು ತಿಂದು ರಿಯಲ್ ಎಸ್ಟೇಟ್ ದಂದೆ ಜೊತೆಗೆ ರಾಜಕೀಯ ಮಾಡುತ್ತಿರುವ ಎರಡು ಸಂಸ್ಥೆಗಳ ರಾಜಕೀಯ ವ್ಯಕ್ತಿಗಳು ಹಾಗೂ ಅಧಿಕಾರಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಬಡವರ ಸಂಸ್ಥೆಗಳನ್ನು ಉಳಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯಾದ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಉಳುಮೆ ಮಾಡಿ ಕೃಷಿ ಕ್ಷೇತ್ರದ ಮೇಲೆ ಬಂಡವಾಳ ಹಾಕಿ ಬೆವರು ಸುರಿಸದ ರಾಜಕೀಯ ವ್ಯಕ್ತಿಗಳು ರೈತರ ಸಂಸ್ಥೆಯಾದ ಡಿ.ಸಿ.ಸಿ ಬ್ಯಾಂಕ್‌ನಲ್ಲಿ ಲೂಟಿ ಮಾಡುತ್ತಾರೆ ಜೊತೆಗೆ ಹಸು ಖರಿದಿ ಮಾಡಲ್ಲ ಗಂಜಲ ಸಗಣಿ ವಾಸನೆ ಪಡೆದುಕೊಳ್ಳಲ್ಲ ಆದರೂ ತಮ್ಮ ಕುಟುಂಬ ಐಶಾರಾಮಿ ಜೀವನಕ್ಕೆ ಹಾಲು ಒಕ್ಕೂಟದಲ್ಲಿ ಲಕ್ಷಾಂತರ ಮಹಿಳೆಯರ ಬೆವರ ಹನಿಯ ಹಸುವಿನ ಸಗಣಿ ತಿಂದು ಕೋಟಿ ಕೋಟಿ ಲೂಟಿ ಮಾಡುವ ಭ್ರಷ್ಠ ವ್ಯವಸ್ಥೆಯ ಜನಪ್ರತಿನಿದಿಗಳಿಗೆ ಅಧಿಕಾರಿಗಳಿಗೆ ಬಡವರ ಕಣ್ಣೀರಿನ ಶಾಪ ತಟ್ಟುವ ಕಾಲ ದೂರವಿಲ್ಲ ಎಂದು ಸಹಕಾರ ಸಚಿವರಿಗೆ ಮನವರಿಕೆ ಮಾಡಿದರು.

ಎರಡು ಸಂಸ್ಥೆಯಲ್ಲಿ ನಡೆದಿರುವ ನೂರಾರು ಕೋಟಿ ಹಗರಣವನ್ನು ಗಂಬೀರವಾಗಿ ಪರಿಗಣಿಸಿ ಕುಂಬಳಕಾಯಿ ಕದ್ದ ಪ್ರಕರಣದಂತೆ ಈ ಹಗರಣವನ್ನು ಸಿ.ಬಿ.ಐ ಗೆ ಒಪ್ಪಿಸಿ ಉಪ್ಪು ತಿಂದಿರುವವರಿಗೆ ಬಹಿರಂಗವಾಗಿ ಸಾರ್ವಜನಿಕವಾಗಿ ನೀರು ಕುಡಿಸಿ ಬಡವರ ಸಂಸ್ಥೆಗಳನ್ನು ಉಳಿಸಬೇಕು ಇಲ್ಲವಾದರೆ ಕುಂಬಳಕಾಯಿಗಳ ಸಮೇತ ಕಳ್ಳರನ್ನು ಪತ್ತೆ ಹಚ್ಚುವಂತೆ ಮುಖ್ಯಮಂತ್ರಿಗಳ ಮನೆ ಮುಂದೆ ಹೋರಾಟ ಮಾಡಿ ನ್ಯಾಯ ಪಡೆದುಕೊಳ್ಳುವ ಎಚ್ಚರಿಕೆಯೊಂದಿಗೆ ಮನವಿ ನೀಡಿ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಕಾರ ಸಚಿವ ರಾಜಣ್ಣ, ಎರಡು ಸಂಸ್ಥೆಗಳ ಹಗರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುವ ಜೊತೆಗೆ ಬಡವರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವವರು ಎಷ್ಟೇ ಪ್ರಭಾವಿಗಳಾದರೂ ರಕ್ಷಣೆ ಮಾಡುವುದಿಲ್ಲ ಎಂದು ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಂಗಸಂದ್ರ ತಿಮ್ಮಣ್ಣ, ಗೀರೀಶ್, ಪುತ್ತೇರಿ ರಾಜು, ಮುಂತಾದವರಿದ್ದರು.

Ramesh Babu

Journalist

Recent Posts

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

1 hour ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

3 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

7 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

8 hours ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

9 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

18 hours ago