Categories: ಕೋಲಾರ

ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಳಿಗೆ, ರೈತರಿಗೆ ಸಾಲ ವಿತರಣೆಗೆ ರೈತ ಸಂಘದಿಂದ ಒತ್ತಾಯ

ಕೋಲಾರ:ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್‌ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಾಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹೈಕೋರ್ಟ್ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳು ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಲು ಕಾರಣವಾದರೂ ಏನೂ ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ ಸಾಲ ನೀಡದ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿಯಾಗಿದ್ದ ಸಹಕಾರ ಬ್ಯಾಂಕ್ ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದು ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ಮಾಡಿ ರೈತರ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದ ಬ್ಯಾಂಕ್‌ನ್ನು ದಿವಾಳಿ ಮಾಡಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಆಡಳಿತ ಮಂಡಳಿ ವಿರುದ್ದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ೧೦ ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ಇವಾಗ ೧೦ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನೂ? ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ ೧ ಕೋಟಿ ೫೦ ಲಕ್ಷ ವ್ಯವಸ್ಥಾಪಕರು ದುರುಪಯೋಗ ಪಡಿಸಿಕೊಂಡಿರುವುದು ಸಾಭಿತಾಗಿದ್ದರೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ, ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಕೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದೆಂದು ಬ್ಯಾಂಕ್ ಅವ್ಯವಸ್ಥೆಯ ಗಂಭೀರ ಆರೋಪ ಮಾಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು, ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ, ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ, ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

9 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

24 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago