Categories: ಕೋಲಾರ

ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಳಿಗೆ, ರೈತರಿಗೆ ಸಾಲ ವಿತರಣೆಗೆ ರೈತ ಸಂಘದಿಂದ ಒತ್ತಾಯ

ಕೋಲಾರ:ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್‌ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಾಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹೈಕೋರ್ಟ್ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳು ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಲು ಕಾರಣವಾದರೂ ಏನೂ ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ ಸಾಲ ನೀಡದ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿಯಾಗಿದ್ದ ಸಹಕಾರ ಬ್ಯಾಂಕ್ ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದು ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ಮಾಡಿ ರೈತರ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದ ಬ್ಯಾಂಕ್‌ನ್ನು ದಿವಾಳಿ ಮಾಡಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಆಡಳಿತ ಮಂಡಳಿ ವಿರುದ್ದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ೧೦ ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ಇವಾಗ ೧೦ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನೂ? ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ ೧ ಕೋಟಿ ೫೦ ಲಕ್ಷ ವ್ಯವಸ್ಥಾಪಕರು ದುರುಪಯೋಗ ಪಡಿಸಿಕೊಂಡಿರುವುದು ಸಾಭಿತಾಗಿದ್ದರೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ, ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಕೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದೆಂದು ಬ್ಯಾಂಕ್ ಅವ್ಯವಸ್ಥೆಯ ಗಂಭೀರ ಆರೋಪ ಮಾಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು, ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ, ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ, ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

6 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

7 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

8 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

9 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

16 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago