Categories: ಕೋಲಾರ

ಡಿಸಿಸಿ ಬ್ಯಾಂಕ್ ನಿಂದ ಮಹಿಳಾ ಸಂಘಗಳಿಗೆ, ರೈತರಿಗೆ ಸಾಲ ವಿತರಣೆಗೆ ರೈತ ಸಂಘದಿಂದ ಒತ್ತಾಯ

ಕೋಲಾರ:ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ ಬ್ಯಾಂಕಿನ ಚುನಾವಣೆ ನಡೆಸಿ ಮಹಿಳಾ ಸಂಘಗಳಿಗೆ ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಿ ಲಕ್ಷಾಂತರ ರೈತರ ಜೀವನಾಡಿ ಆಗಿರುವ ಬ್ಯಾಂಕ್‌ನ್ನು ಉಳಿಸಬೇಕೆಂದು ರೈತ ಸಂಘದಿಂದ ಬ್ಯಾಂಕ್ ಮುಂದೆ ತಲೆ ಮೇಲೆ ಕಲ್ಲು ಹೊತ್ತುಕೊಂಡು ಹೋರಾಟ ಮಾಡಿ ಉಪ ವಿಭಾಗಾಧಿಕಾರಿಗಳ ಮುಖಾಂತರ ಸಹಕಾರ ಸಚಿವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಹೈಕೋರ್ಟ್ ನ್ಯಾಯಾಲಯವೂ ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಚುನಾವಣೆ ನಡೆಸದೆ ಜಿಲ್ಲಾಧಿಕಾರಿಗಳು ಚುನಾವಣೆ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಲು ಕಾರಣವಾದರೂ ಏನೂ ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ ಸಾಲ ನೀಡದ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿಯಾಗಿದ್ದ ಸಹಕಾರ ಬ್ಯಾಂಕ್ ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದು ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ಮಾಡಿ ರೈತರ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ, ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದ ಬ್ಯಾಂಕ್‌ನ್ನು ದಿವಾಳಿ ಮಾಡಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಆಡಳಿತ ಮಂಡಳಿ ವಿರುದ್ದ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು ೧೦ ವರ್ಷಗಳ ಕಾಲ ಲಾಭದಲ್ಲಿದ್ದಂತಹ ಬ್ಯಾಂಕ್ ಇವಾಗ ೧೦ ಕೋಟಿ ಸಾಲದ ಸುಳಿಯಲ್ಲಿ ಸಿಲುಕಿರುವ ಹಿಂದಿನ ರಹಸ್ಯವೇನೂ? ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ರವರು ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ ೧ ಕೋಟಿ ೫೦ ಲಕ್ಷ ವ್ಯವಸ್ಥಾಪಕರು ದುರುಪಯೋಗ ಪಡಿಸಿಕೊಂಡಿರುವುದು ಸಾಭಿತಾಗಿದ್ದರೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ, ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಕೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡುತ್ತಿದೆಂದು ಬ್ಯಾಂಕ್ ಅವ್ಯವಸ್ಥೆಯ ಗಂಭೀರ ಆರೋಪ ಮಾಡಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು, ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ, ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ, ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಅಧಿಕಾರಿಗಳು, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

Ramesh Babu

Journalist

Recent Posts

KSRTC ಬಸ್-ಕಂಟೇನರ್ ಲಾರಿ ನಡುವೆ ಅಪಘಾತ; ಕೆಲವರಿಗೆ ಗಾಯ

ಹೊಸಕೋಟೆ: ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ KSRTC ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ…

3 hours ago

ರಾಜ್ಯಸಭೆ, ಪರಿಷತ್ ಚುನಾವಣೆ: ಬಿಜೆಪಿ ಅಚ್ಚರಿ ನಿರ್ಧಾರ, ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ನಿರಾಕರಣೆ

ಬೆಂಗಳೂರು: 2026ರ ರಾಜ್ಯಸಭೆ ಹಾಗೂ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಕರ್ನಾಟಕದಿಂದ ರಾಜ್ಯಸಭೆಗೆ…

6 hours ago

ಅಳಬೇಡಿ ಸ್ವಾಮಿ ಅಳಬೇಡಿ, ದಯವಿಟ್ಟು ಅಳಬೇಡಿ, ಸ್ವಲ್ಪ ನಕ್ಕು ಬಿಡಿ…..

ನಾನು ವಿದ್ಯಾವಂತನಾಗಿರಲಿಲ್ಲ, ಅದರಿಂದಾಗಿ ಯಶಸ್ವಿಯಾಗಲಿಲ್ಲ. ನಾನು ಬುದ್ದಿವಂತನಾಗಿರಲಿಲ್ಲ, ಅದರಿಂದಾಗಿ ಜನಪ್ರಿಯನಾಗಲಿಲ್ಲ. ನಾನು ಪ್ರತಿಭಾವಂತನಾಗಿರಲಿಲ್ಲ, ಅದರಿಂದಾಗಿ ಪ್ರಖ್ಯಾತನಾಗಲಿಲ್ಲ. ನಾನು ಶ್ರೀಮಂತನಾಗಿರಲಿಲ್ಲ, ಅದರಿಂದಾಗಿ…

8 hours ago

ದೊಡ್ಡಬಳ್ಳಾಪುರ ಯೋಗಾ ಪ್ರತಿಭೆ, ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಪುರಸ್ಕೃತೆ ಜಾಹ್ನವಿ ಎಂ.ಆರ್ ಗೆ ಸನ್ಮಾನ

ಕರ್ನಾಟಕ ಸ್ಟೇಟ್ ಅಮೆಚೂರು ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ ವತಿಯಿಂದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಜೂ.6, 7ರಂದು ನಡೆದ ರಾಜ್ಯಮಟ್ಟದ…

20 hours ago

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

1 day ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

1 day ago