Categories: ಕೋಲಾರ

ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಡಿ.4 ರಂದು ಬ್ಯಾಂಕ್ ಮುತ್ತಿಗೆಗೆ ರೈತ ಸಂಘ ನಿರ್ಧಾರ

ಕೋಲಾರ: ಲಕ್ಷಾಂತರ ರೈತ ಕೂಲಿಕಾರ್ಮಿಕರು, ಮಹಿಳೆಯರ ಜೀವನಾಡಿಯಾಗಿರುವ ಬಂಗಾರಪೇಟೆ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿರುವ ಕೋಟಿ ಕೋಟಿ ಹಗರಣವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ಡಿ.4 ರಂದು ಪೋರಕೆಗಳ ಸಮೇತ ಬ್ಯಾಂಕ್ ಮುತ್ತಿಗೆ ಹಾಕಲು ಬಂಗಾರಪೇಟೆ ಅರಣ್ಯ ಉದ್ಯಾನವನದಲ್ಲಿ ಕರೆದಿದ್ದ ರೈತ ಸಂಘದ ಸಭೆಯಲ್ಲಿ ತಿರ್ಮಾನಿಸಲಾಯಿತು.

ಸ್ಥಳೀಯ ಶಾಸಕರು ಸರ್ಕಾರದ ಮುಖ್ಯಮಂತ್ರಿಗಳ ಜೊತೆ ಅತಿ ಆತ್ಮೀರಾಗಿದ್ದರೂ ಡಿ.ಸಿ.ಸಿ ಬ್ಯಾಂಕ್‌ಗೆ ಚುನಾವಣೆ ನಡೆಸುವಂತೆ ಏಕೆ ಒತ್ತಡ ಹಾಕುತ್ತಿಲ್ಲ. 3 ಬಾರಿ ಶಾಸಕರಾಗಿರುವ ಅವರು ಲಕ್ಷಾಂತರ ರೈತ ಕುಂಟುಂಬಗಳ ಅವ್ಯವಸ್ಥೆ ಹಾಗೂ ತನ್ನ ಕ್ಷೇತ್ರದ ಬ್ಯಾಂಕಿನಲ್ಲಿಯೇ ನಡೆದಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ದ್ವನಿ ಎತ್ತದೆ ಇರಲು ಕಾರಣ ಏನೂ ಎಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಪ್ರಶ್ನೆ ಮಾಡಿದರು.

ಡಿಸಿಸಿ ಬ್ಯಾಂಕ್ ಬಡವರ ಪಾಲಿಗೆ ಮುಳ್ಳಿನ ಹಾದಿಯಾಗಿ ಶ್ರೀಮಂತರ ಹಾಗೂ ಅಧಿಕಾರಿಗಳ ಪಾಲಿಗೆ ಚಿನ್ನದ ಮೊಟ್ಟೆಯಿಡುವ ೨೪ ಗಂಟೆಯ ಎಟಿಎಂ ಆಗಿ ಮಾರ್ಪಟ್ಟಿರುವುದು ದುರಾದೃಷ್ಟಕರ. ಬಂಗಾರಪೇಟೆ ತಾಲೂಕಿನಾದ್ಯಂತ ಡಿಸಿಸಿ ಬ್ಯಾಂಕ್ ವ್ಯಾಪ್ತಿಗೆ ಬರುವ ಎಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ನಕಲಿ ಸಂಘಗಳ ಹಾವಳಿ ಹಾಗೂ ಸಾಲ ನೀಡುವಲ್ಲಿ ತಾರತಮ್ಯ ಮಾಡಿ ಬಡ ಮಹಿಳೆಯರ ಕೋಟ್ಯಾಂತರ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವುದು ಸತ್ಯವಲ್ಲವೇ ಎಂದು ವ್ಯವಸ್ಥಾಪಕರಿಗೆ ಸವಾಲು ಹಾಕಿದರು.

ನಿಯತ್ತಾಗಿ ಸಾಲ ಪಡೆದು, ಮರುಪಾವತಿ ಮಾಡಿರುವ ಸ್ವಾಭಿಮಾನ ಇರುವಂತಹ ಮಹಿಳೆಯರು ರೈತರಿಗೆ ಸಾಲ ಕೊಡಬೇಕಾದರೆ ಅಧಿಕಾರಿಗಳಿಗೆ ನೂರೊಂದು ಕಾನೂನು ಆದರೆ, ಬ್ಯಾಂಕಿನಲ್ಲಿ ರಾಜಕಾರಣ ಮಾಡುತ್ತಿರುವವರು ಕೋಟ್ಯಂತರ ರೂಪಾಯಿ ಕೋಳಿ, ಕೃಷಿ ಸಾಲ ಮತ್ತು ನಕಲಿ ಸ್ತ್ರೀಶಕ್ತಿ ಸಂಘಗಳನ್ನು ಸೃಷ್ಟಿ ಮಾಡಿ ಲೂಟಿ ಮಾಡಿದ್ದರೂ ಅವರ ವಿರುದ್ಧ ಕ್ರಮವಿಲ್ಲವೇಕೆ ಬಡವರ ಬ್ಯಾಂಕ್‌ನ್ನು ಹಾಳು ಮಾಡಿ ಖಾಸಗಿ ಫೈನಾನ್ಸ್ ಕಂಪನಿಗಳಿಗೆ ಗ್ರಾಮೀಣ ಪ್ರದೇಶಗಳಲ್ಲಿನ ರೈತ ಕೂಲಿಕಾರ್ಮಿಕರನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.

ನೊಂದ ಸಾಲ ವಂಚಿತ ರೈತ ಮಹಿಳೆ ಶೈಲಜ ಮಾತನಾಡಿ, ಬಡವರ ಬದುಕಿಗೆ ಆಸರೆಯಾಗಿದ್ದ ಡಿ.ಸಿ.ಸಿ ಬ್ಯಾಂಕ್ ರಾಜಕಾರಣಿಗಳ ಗುಂಪುಗಾರಿಕೆಗೆ ಸಮಪೂರ್ಣವಾಗಿ ಸಾಲದ ಸುಳಿಗೆ ಸಿಲುಕಿ ನಷ್ಟದ ಹಾದಿ ಹಿಡಿಯುತ್ತಿದೆ. ಅದನ್ನೇ ನಂಬಿರುವ ನಮ್ಮಂತಹ ಸಾವಿರಾರು ಬಡ ಮಹಿಳೆಯರು ಬೀದಿಗೆ ಬೀಳುವ ಮಟ್ಟಕ್ಕೆ ಜನಪ್ರತಿನಿದಿಗಳು ನಡೆದುಕೊಳ್ಳುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ಡಿ.ಸಿಸಿ ಬ್ಯಾಂಕ್‌ನಲ್ಲಿ ಸಾಲ ಸಿಗದೆ ಮಕ್ಕಳ ವಿದ್ಯಾಭ್ಯಾಸ ಹಿರಿಯರ ಆರೋಗ್ಯಕ್ಕೆ ಹಣ ಇಲ್ಲದೆ ಖಾಸಗಿ ಪೈನಾನ್ಸ್ಗಳಿಗೆ ಮೊರೆ ಹೋಗಿ ಮೀಟರ್ ದಂದೆಯಂತೆ ಬಡವರ ರಕ್ತ ಹೀರುವ ಪೈನಾನ್ಸ್ಗಳಿಂದ ಸಾಲ ಪಡೆದು ಕೂಲಿ ಮಾಡಿದ ಹಣವನ್ನು ಕಟ್ಟಿ ಹೊಟ್ಟೆಗೆ ತಣ್ನಿರು ಬಗ್ಗೆ ಹಾಕಿಕೊಳ್ಳುವ ಮಟ್ಟಕ್ಕೆ ಬಡವರ ಬದುಕು ಬಂದು ನಿಂತಿದೆ. ಬಡವರ ಕಣ್ಣೀರು ಅಧಿಕಾರಿಗಳಿಗೆ ಜನಪ್ರತಿನಿದಿಗಳಿಗೆ ಶಾಪವಾಗಿ ತಟ್ಟುತ್ತದೆ ಎಂದರು.

ಬಡವರ ಬ್ಯಾಂಕ್ ಉಳಿಯಬೇಕು, ಚುನಾವಣೆ ನಡೆಸಬೇಕು. ನಕಲಿ ದಾಖಲೆಗಳನ್ನು ಸೃಷ್ಠಿಸಿ ಕೋಟಿಕೋಟಿ ಲೂಟಿ ಮಾಡಿರುವ ವ್ಯವಸ್ಥಾಪಕರು ಹಾಗೂ ಬಲಿತ ಶ್ರೀಮಂತರಿಂದ ಸಾಲ ವಸೂಲಾತಿ ಮಾಡಿ ಎಲ್ಲಾ ಸಹಕಾರ ಸಂಘಗಳಲ್ಲಿ ನಡೆದಿರುವ ಹಗರಣವನ್ನು ಸೂಕ್ತ ಅಧಿಕಾರಿಗಳಿಂದ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ಬ್ಯಾಂಕ್ ಅನ್ನು ಉಳಿಸಬೇಕೆಂದು ಡಿ.೪ ಬುಧವಾರ ಪೊರಕೆಗಳ ಸಮೇತ ಬ್ಯಾಂಕ್ ವಹಿವಾಟನ್ನು ಸ್ಥಗಿತಗೊಳಿಸಿ ಹೋರಾಟ ಮಾಡುವ ತಿರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತೆಂದರು.

ಸಭೆಯಲ್ಲಿ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಸುಪ್ರೀಂಚಲ, ಶಶಿ, ವೇಣು, ಆಂಜಿನಪ್ಪ, ಬಂಗವಾದಿ ನಾಗರಾಜ್‌ಗೌಡ, ಅಪ್ಪೋಜಿರಾವ್, ಮುನಿಕೃಷ್ಣ, ರತ್ನಮ್ಮ, ಸುಗುಣ, ಚೌಡಮ್ಮ, ರಾಧ, ಮುನಿಯಮ್ಮ, ಮುಂತಾದವರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

9 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

16 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

16 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago