ಡಿಸಿ ಆದೇಶ ಗಾಳಿಗೆ ತೂರಿ ಘಾಟಿಯಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟ

ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್‌ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದರು.

ಘಾಟಿ ಕ್ಷೇತ್ರದಲ್ಲಿರುವ ಸಸ್ಯ ಸಂಕುಲ, ಪ್ರಾಣಿ-ಪಕ್ಷಿ, ಸೂಕ್ಷ್ಮಜೀವಿಗಳು, ಮಾನವ ಸಂಕುಲ ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶ ಪಾಲಿಸಲು ಘಾಟಿ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಿಸುವಂತೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ತಪಾಸಣೆ ನಡೆಸಿ, ನಿರ್ಬಂಧಿಸುವಂತೆ ತಿಳಿಸಿದ್ದಾರೆ.

ಆದರೆ, ಡಿಸಿ ಆದೇಶವನ್ನು ಗಾಳಿಗೆ ತೂರಿ ಪ್ಲಾಸ್ಟಿಕ್ ವಸ್ತುಗಳನ್ನು ಎಗ್ಗಿಲ್ಲದೇ ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ.  ಶೇ.10ರಷ್ಟು ಮಾತ್ರ ಡಿಸಿ ಆದೇಶದ ನಂತರ ಪ್ಲಾಸ್ಟಿಕ್ ನಿಷೇಧವಾಗಿದೆ. ದೇವಸ್ಥಾನಕ್ಕೆ ಪೂಜಾ ಸಾಮಗ್ರಿಗಳನ್ನು ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ತರಲಾಗುತ್ತಿದೆ. ದೇವಾಲಯದ ಹೊರಭಾಗದಲ್ಲಿರುವ ಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ‌.

ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಿಯೂ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಾಣ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸಿಲ್ಲ.

ಇನ್ನೂ ಮುಂದೆಯಾದರೂ ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟಕ್ಕೆ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ…

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

3 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

4 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

7 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

16 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago