ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದರು.
ಘಾಟಿ ಕ್ಷೇತ್ರದಲ್ಲಿರುವ ಸಸ್ಯ ಸಂಕುಲ, ಪ್ರಾಣಿ-ಪಕ್ಷಿ, ಸೂಕ್ಷ್ಮಜೀವಿಗಳು, ಮಾನವ ಸಂಕುಲ ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶ ಪಾಲಿಸಲು ಘಾಟಿ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಿಸುವಂತೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ತಪಾಸಣೆ ನಡೆಸಿ, ನಿರ್ಬಂಧಿಸುವಂತೆ ತಿಳಿಸಿದ್ದಾರೆ.
ಆದರೆ, ಡಿಸಿ ಆದೇಶವನ್ನು ಗಾಳಿಗೆ ತೂರಿ ಪ್ಲಾಸ್ಟಿಕ್ ವಸ್ತುಗಳನ್ನು ಎಗ್ಗಿಲ್ಲದೇ ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ. ಶೇ.10ರಷ್ಟು ಮಾತ್ರ ಡಿಸಿ ಆದೇಶದ ನಂತರ ಪ್ಲಾಸ್ಟಿಕ್ ನಿಷೇಧವಾಗಿದೆ. ದೇವಸ್ಥಾನಕ್ಕೆ ಪೂಜಾ ಸಾಮಗ್ರಿಗಳನ್ನು ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ತರಲಾಗುತ್ತಿದೆ. ದೇವಾಲಯದ ಹೊರಭಾಗದಲ್ಲಿರುವ ಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ.
ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಿಯೂ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಾಣ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸಿಲ್ಲ.
ಇನ್ನೂ ಮುಂದೆಯಾದರೂ ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟಕ್ಕೆ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ…
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…