ಡಿಸಿ ಆದೇಶ ಗಾಳಿಗೆ ತೂರಿ ಘಾಟಿಯಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟ

ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ ದೇವಸ್ಥಾನ ಪ್ರದೇಶದ ವ್ಯಾಪ್ತಿಯಲ್ಲಿ ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್‌ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ಆದೇಶ ಮಾಡಿದ್ದರು.

ಘಾಟಿ ಕ್ಷೇತ್ರದಲ್ಲಿರುವ ಸಸ್ಯ ಸಂಕುಲ, ಪ್ರಾಣಿ-ಪಕ್ಷಿ, ಸೂಕ್ಷ್ಮಜೀವಿಗಳು, ಮಾನವ ಸಂಕುಲ ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶ ಪಾಲಿಸಲು ಘಾಟಿ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಿಸುವಂತೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ತಪಾಸಣೆ ನಡೆಸಿ, ನಿರ್ಬಂಧಿಸುವಂತೆ ತಿಳಿಸಿದ್ದಾರೆ.

ಆದರೆ, ಡಿಸಿ ಆದೇಶವನ್ನು ಗಾಳಿಗೆ ತೂರಿ ಪ್ಲಾಸ್ಟಿಕ್ ವಸ್ತುಗಳನ್ನು ಎಗ್ಗಿಲ್ಲದೇ ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ.  ಶೇ.10ರಷ್ಟು ಮಾತ್ರ ಡಿಸಿ ಆದೇಶದ ನಂತರ ಪ್ಲಾಸ್ಟಿಕ್ ನಿಷೇಧವಾಗಿದೆ. ದೇವಸ್ಥಾನಕ್ಕೆ ಪೂಜಾ ಸಾಮಗ್ರಿಗಳನ್ನು ಪ್ಲಾಸ್ಟಿಕ್ ಬ್ಯಾಗ್ ಗಳಲ್ಲಿ ತರಲಾಗುತ್ತಿದೆ. ದೇವಾಲಯದ ಹೊರಭಾಗದಲ್ಲಿರುವ ಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡಲಾಗುತ್ತಿದೆ‌.

ಗ್ರಾಮ ಪಂಚಾಯಿತಿ ವತಿಯಿಂದ ಎಲ್ಲಿಯೂ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಸ್ಟ್ ನಿರ್ಮಾಣ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸಿಲ್ಲ.

ಇನ್ನೂ ಮುಂದೆಯಾದರೂ ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆ, ಮಾರಾಟಕ್ಕೆ ಕಡಿವಾಣ ಬೀಳುತ್ತಾ ಕಾದು ನೋಡಬೇಕಿದೆ…

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago